ಲಖನೌ: ಟ್ರ್ಯಾಕ್ಟರ್ ಟ್ರಾಲಿ ಸೇತುವೆ ಕೆಳಗೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಿನ್ನೆ (ಏಪ್ರಿಲ್ 15) ನಡೆದಿದೆ.
ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯರ ಸಹಾಯದಿಂದ ಹತ್ತಿರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ 11 ಮಂದಿಯಲ್ಲಿ ಇಬ್ಬರು ಮಹಿಳೆಯರು, ಓರ್ವ ವ್ಯಕ್ತಿ ಮತ್ತು 8 ಮಂದಿ ಅಪ್ರಾಪ್ತರು ಸೇರಿದ್ದಾರೆ. ಸುಮಾರು 29 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಶಹಜಹಾನ್ಪುರದ ಬಿರ್ಸಿಂಗ್ಪುರ್ ಗ್ರಾಮದಲ್ಲಿರುವ ಗರ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಟ್ರಾಲಿ ನದಿಗೆ ಬಿದ್ದು ಅವಘಡ ಸಂಭವಿಸಿದೆ. ಪೊಲೀಸರು ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ: ಕರೊನಾಗೆ ಚೆಲ್ಲಾಟ, ವೆಂಕಿಗೆ ಪ್ರಾಣಸಂಕಟ: ವಿಜಯವಾಣಿ ಸಿನಿಮಾ ವಿಮರ್ಶೆ
जनपद शाहजहांपुर में दुर्घटना में हुई जनहानि अत्यंत दुःखद है। मेरी संवेदनाएं शोकाकुल परिजनों के साथ हैं।
प्रशासनिक अधिकारियों को युद्ध स्तर पर राहत-बचाव कार्य संचालित करने व घायलों के समुचित उपचार हेतु निर्देश दिए हैं।
प्रभु श्री राम से घायलों के शीघ्र स्वास्थ्य लाभ की कामना है।
— Yogi Adityanath (@myogiadityanath) April 15, 2023
ಉತ್ತರ ಪ್ರದೇಶd ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಆಡಳಿತಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜನರು ಗರ್ರಾ ನದಿಯಿಂದ ಭಗವತ್ ಕಥೆಗಾಗಿ ನೀರು ತರಲು ನದಿಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ಶಹಜಹಾನ್ಪುರ ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಸುಮಾರು 40 ಕ್ಕೂ ಹೆಚ್ಚು ಜನರಿದ್ದರು ಎಂದು ತಿಳಿದುಬಂದಿದೆ. (ಏಜೆನ್ಸೀಸ್)
ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!
ಬಾವಲಿ.. ಹಾವಳಿಯಷ್ಟೇ ಅಲ್ಲ..: ಶಕ್ತಿಶಾಲಿ ಸಸ್ತನಿಗಳ ಕೌತುಕಮಯ ಜೀವನದತ್ತ ಒಂದು ಇಣುಕು ನೋಟ
ಪಾತಕಿ ಅತೀಖ್ ಅಹಮದ್ ಜತೆಗೆ ಸಹೋದರ ಅಶ್ರಫ್ ಅಹಮದ್ ಕೂಡ ಗುಂಡಿಗೆ ಬಲಿ!