12ಕ್ಕೂ ಹೆಚ್ಚು ಕುರಿಗಳು ಸಾವು

ಮದ್ದೂರು: ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 12ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.

blank

ಮಂಡ್ಯ ತಾಲೂಕು ಬಸರಾಳು ಹೋಬಳಿ ಚನ್ನಾಪುರ ಗ್ರಾಮದ ರಾಜು ಅವರ ಕುರಿಗಳು ಮೃತಪಟ್ಟಿರುವುದು. ರಾಜು ಅವರು ಕುರಿಗಳಿಗೆ ಮೇವು ಹುಡಿಕೊಂಡು ಸುಮಾರು 250ಕ್ಕೂ ಹೆಚ್ಚು ಕುರಿಗಳೊಂದಿಗೆ ಸೋಮನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಶುಕ್ರವಾರ ಬಂದಿದ್ದರು. ಮಧ್ಯಾಹ್ನದ ನಂತರ ಮೇವು ತಿಂದ ಬಳಿಕ ಅಲ್ಲಿಯೇ ಇದ್ದ ಚರಂಡಿ ನೀರನ್ನು ಕುರಿಗಳು ಕುಡಿದಿವೆ. ನೀರು ಕುಡಿದು ಕೆಲ ಹೊತ್ತಿನಲ್ಲೇ 12ಕ್ಕೂ ಹೆಚ್ಚು ಕುರಿಗಳು ನರಳಿ ಮೃತಪಟ್ಟಿವೆ. ಇದಕ್ಕೆ ವಿಷ ಮಿಶ್ರಿತ ಕಲುಷಿತ ನೀರು ಕಾರಣ ಎಂದು ಮಾಲೀಕ ಆರೋಪಿಸಿದ್ದಾರೆ. ಇನ್ನೂ ಹಲವಾರು ಕುರಿಗಳು ಅಸ್ವಸ್ಥಗೊಂಡಿವೆ.

ಸಂಬಂಧಪಟ್ಟ ಅಧಿಕಾರಿಗಳು ಚರಂಡಿಗೆ ಯಾವ ಕಾರ್ಖಾನೆಯಿಂದ ವಿಷ ಮಿಶ್ರಿತ ನೀರು ಬರುತ್ತಿದೆ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank