ಚಿತ್ರದುರ್ಗ:ಎಐಸಿಸಿ ಹಿಂದಿನ ಅಧ್ಯಕ್ಷ ರಾಹುಲ್ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸಿ ಕಾಂಗ್ರೆಸ್ ಕಾರ್ಯಕರ್ತರು ಜು.12ರಂದು ಚಿತ್ರದುರ್ಗ ಹಾಗೂ ಹೊಳಲ್ಕೆರೆಯಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಲಿದ್ದಾರೆ.
ನಿರಂತರ ಹೋರಾಟದ ಮೂಲಕ ಜನಮೆಚ್ಚುಗೆ ಗಳಿಸಿರುವ ರಾಹುಲ್ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಹೊಳಲ್ಕೆರೆ ತಾಲೂಕು ಕಚೇರಿ ಬಳಿ ಬೆಳಗ್ಗೆ 10ರಿಂದ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎ ಚ್.ಆಂಜನೇಯ ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ.
ಕೇಂದ್ರದ ವಿರುದ್ಧ ಹಾಗೂ ರಾಹುಲ್ಗಾಂಧಿ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಕಾಂಗ್ರೆಸ್ ಕಮಿಟಿ ನೇತೃತ್ವದಲ್ಲಿ ಚಿತ್ರದುರ್ಗದ ಡಾ.ಬಿ.ಆರ್.ಅಂ ಬೇಡ್ಕರ್ ಪ್ರತಿಮೆ ಬಳಿ ಅಂದು ಬೆಳಗ್ಗೆ 10ರಿಂದ ಜಿಲ್ಲಾ ಕಾಂಗ್ರೆಸ್ ಕಮಿಟಿ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿ ವ ಡಿ.ಸುಧಾಕರ್,ಪಕ್ಷದ ಶಾಸಕರು,ಮಾಜಿ ಸಚಿವರು,ಶಾಸಕರು,ಮಾಜಿ ಸಂಸದರು ಸೇರಿ ಪಕ್ಷದ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗ ವಹಿಸಲಿದ್ದಾರೆ.
(ಎಚ್.ಆಂಜನೇಯ ಮಗ್ ಶಾಟ್)