More

    ಹಪ್ಪಳಕ್ಕಾಗಿ ಮದುವೆ ಮಂಟಪದಲ್ಲಿ ನಡೆಯಿತು ಭಾರಿ ಗಲಾಟೆ: ನಷ್ಟವಾಗಿದ್ದು ಬರೋಬ್ಬರಿ 1.5 ಲಕ್ಷ ರೂಪಾಯಿ

    ಕೊಚ್ಚಿ: ಮದುವೆ ಸಮಾರಂಭದ ವೇಳೆ ಹೆಚ್ಚುವರಿ ಹಪ್ಪಳಕ್ಕಾಗಿ ನಡೆದ ಗಲಾಟೆಯಲ್ಲಿ ಟೇಬಲ್ಸ್​ ಮತ್ತು 25 ಕುರ್ಚಿಗಳಿಗೆ ಹಾನಿಯಾಗಿದ್ದು ಸೇರಿದಂತೆ ಕಲ್ಯಾಣ ಮಂಟಪಕ್ಕೆ ಸುಮಾರು 1.5 ಲಕ್ಷ ರೂಪಾಯಿ ನಷ್ಟವಾಗಿರುವ ಘಟನೆ ಕೇರಳದ ಹರಿಪಾದದಲ್ಲಿ ನಡೆದಿದೆ.

    ಈ ಘಟನೆ ಭಾನುವಾರ (ಆ.28) ಮುತ್ತೊಮ್​ನಲ್ಲಿ ನಡೆದಿದೆ. ಮದುವೆ ವೇಳೆ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳವನ್ನು ಕೇಳಿದರು. ಇದು ಎರಡು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾಗ್ವಾದ ಹೊಡೆದಾಟಕ್ಕೂ ತಿರುಗಿ, ಕಲ್ಯಾಣ ಮಂಟಪದಲ್ಲೇ ಎರಡು ಗುಂಪಿನವರು ಬಡಿದಾಡಿಕೊಂಡರು.

    ಇದೇ ಸಂದರ್ಭದಲ್ಲಿ ಕಲ್ಯಾಣ ಮಂಟಪದ ಮಾಲೀಕರು ಎರಡು ಗುಂಪಿನ ನಡುವೆ ಮಾತನಾಡಿದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಲಾಟೆಯಲ್ಲಿ ಮಾಲೀಕರು ಸೇರಿದಂತ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. (ಏಜೆನ್ಸೀಸ್​)

    ಅಕ್ಕಿ ವ್ಯಾಪಾರಿ ಬಳಿ 5 ಲಕ್ಷ ರೂ.ಗೆ ಬೆದರಿಕೆ ಹಾಕಿ ಪೊಲೀಸರ ಕೈಗೆ ಸಿಕ್ಕಿಬಿದ್ದ 6 ಮಂದಿ ನಕಲಿ ಪತ್ರಕರ್ತರು!

    ಈ ಹಿಂದೆ ಅಮಲಾ ಪೌಲ್​ರ ಖಾಸಗಿ ಫೋಟೋಗಳನ್ನು ಲೀಕ್​ ಮಾಡಿದ್ದ ಮಾಜಿ ಪ್ರಿಯಕರ ಬೇರೊಂದು ಕಾರಣಕ್ಕೆ ಬಂಧನ

    ಗೌರಿಯರ ಗಣೇಶ ಹಬ್ಬ: ಗಜಮುಖ ಗಣಪತಿಗೆ ತಾರೆಯರ ವಂದನೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts