More

    13 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ

    ಬೆಳಗಾವಿ: ನಗರದ ಧಾಮಣೆ ರಸ್ತೆ ಸಮೀಪದ ಮನೆ ಮೇಲೆ ಶನಿವಾರ ತಡರಾತ್ರಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮತ್ತು ಶಹಾಪುರ ಠಾಣೆ ಪೊಲೀಸರು ಜಂಟಿ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 13 ಕ್ವಿಂಟಾಲ್ ಅಕ್ಕಿ, 85 ಕೆ.ಜಿ. ಹಾಲಿನ ಪೌಡರ್ ವಶಕ್ಕೆ ಪಡೆದಿದ್ದಾರೆ.

    ಆರೋಪಿತ ಆಸ್ಿ ಕಿಲ್ಲೇದಾರ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಪರಾರಿಯಾಗಿರುವ ಆಸ್ಿ, ಪಡಿತರ ಚೀಟಿದಾರರ ಮನೆಗೆ ತೆರಳಿ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಅಕ್ಕಿಯನ್ನು ಕಡಿಮೆ ದರಕ್ಕೆ ಖರೀದಿಸುತ್ತಿದ್ದ. ಬೇರೆ ರಾಜ್ಯದಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

    ಕ್ಷೀರಭಾಗ್ಯ ಯೋಜನೆಯಡಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ವಿತರಿಸಲಾಗುವ ಹಾಲಿನ ಪೌಡರ್ ಎಲ್ಲಿ ಸಂಗ್ರಹಿಸಿದ್ದ ಎನ್ನುವ ಮಾಹಿತಿ ಕಲೆಹಾಕಲಾಗುತ್ತಿದೆ. ತನಿಖೆ ಪೂರ್ಣಗೊಂಡ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆಹಾರ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಮ ಮಾರಿಹಾಳ ತಿಳಿಸಿದ್ದಾರೆ. ಶಹಾಪುರ ಠಾಣೆ ಪಿಎಸ್‌ಐ ಮಂಜುನಾಥ ನಾಯಿಕ, ಆಹಾರ ನಿರೀಕ್ಷಕ ವಿ.ಬಿ.ದಿವಟಗಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts