ಮೇರಠ್: ದೆಹಲಿಯ ನಿಜಾಮುದ್ದೀನ್ನಲ್ಲಿ ಆಯೋಜನೆಗೊಂಡಿದ್ದ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಂತರ ಕಾಣೆಯಾಗಿ ಮೌಲಾನಾ ಅವರ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ 14 ಮಂದಿ ಧಾರ್ಮಿಕ ಬೋಧಕರನ್ನು ಪೊಲೀಸರು ಬಂಧಿಸಿದ್ದಾರೆ.
ನಿಷೇಧಾಜ್ಞೆಯ ಹೊರತಾಗಿಯೂ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಕೇಂದ್ರದಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೇಪಾಳ, ಬಿಹಾರ, ದೆಹಲಿ ಮತ್ತು ಮಹಾರಾಷ್ಟ್ರದ ಇವರೆಲ್ಲರೂ ಪಾಲ್ಗೊಂಡಿದ್ದರು. ಕರೊನಾ ವೈರಸ್ ಸೋಂಕು ಹರಡಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಅಲ್ಲಿಂದ ತಪ್ಪಿಸಿಕೊಂಡು ಮೇರಠ್ಗೆ ಬಂದ ಇವರೆಲ್ಲರೂ ಮೌಲಾನಾ ಅವರ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದರು ಎನ್ನಲಾಗಿದೆ.
ಸದ್ಯ ಇವರೆಲ್ಲರೂ ಅದೇ ಮನೆಯಲ್ಲಿ 14 ದಿನ ಕ್ವಾರಂಟೇನ್ನಲ್ಲಿ ಇರಿಸಲಾಗುತ್ತಿದೆ. ಇವರೆಲ್ಲರಿಗೂ ಆಶ್ರಯ ನೀಡಿದ ಆರೋಪದಲ್ಲಿ ಮೌಲಾನಾ ವಿರುದ್ಧ ದೂರು ದಾಖಲಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಪೊಲೀಸರು ಹೇಳಿದ್ದಾರೆ.