ಆಕ್ಷೇಪಣೆ ಸಲ್ಲಿಸಲು 15 ದಿನ ಗಡುವು

15 days to file objections

ಜಮಖಂಡಿ: ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿನ ಬೆಳೆಗಳಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಸಲ್ ಬಿಮಾ ಯೋಜನೆಯಡಿ ತಿರಸ್ಕೃತ ಅರ್ಜಿಗಳಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಕೃಷಿ ಇಲಾಖೆ ತಿಳಿಸಿದೆ.

ಜಮಖಂಡಿ ತಾಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನ 359, ಹಿಂಗಾರು ಹಂಗಾಮಿನ 58 ಮತ್ತು ಬೇಸಿಗೆ ಹಂಗಾಮಿನ 85 ಪ್ರಸ್ತಾವನೆಗಳು ಹಾಗೂ ರಬಕವಿ-ಬನಹಟ್ಟಿ ತಾಲೂಕಿನ 2023-24ನೇ ಸಾಲಿನ ಮುಂಗಾರು ಹಂಗಾಮಿನ 9, ಬೇಸಿಗೆ ಹಂಗಾಮಿನ 22 ಪ್ರಸ್ತಾವನೆಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ.

ಈ ಕುರಿತು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಲಕಗಳಲ್ಲಿ ಮಾಹಿತಿ ನೀಡಲಾಗಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗಾಗಿ 15 ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

ರಾತ್ರಿ ಬಾಯಿ ತೆರೆದು ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ! ಇಂದೇ ಈ ಅಭ್ಯಾಸ ಬಿಟ್ಟು ಬಿಡಿ.. Sleeping Disorder

Sleeping Disorder : ಸಾಮಾನ್ಯವಾಗಿ ನಿದ್ದೆ ಮಾಡುವಾಗ ಕೆಲವರಿಗೆ  ಬಾಯಿ ತೆರೆದುಕೊಂಡು ಮಲಗುವ ಅಭ್ಯಾಸ ಇರುತ್ತದೆ.…

ಅಪ್ಪಿತಪ್ಪಿಯೂ ತುಪ್ಪದೊಂದಿಗೆ ಇವುಗಳನ್ನು ತಿನ್ನಬೇಡಿ… ತಿಂದರೆ ಈ ಎಲ್ಲ ಸಮಸ್ಯೆಗಳು ಉಂಟಾಗುತ್ತವೆ! Ghee

Ghee : ದೇಹದ ಆರೋಗ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಕೊಬ್ಬನ್ನು ಸೇವಿಸುವುದು ಮುಖ್ಯ. ಆದರೆ, ಅನಾರೋಗ್ಯಕರ ಕೊಬ್ಬನ್ನು…

ಮುಖದಿಂದ ಹೋಳಿ ಬಣ್ಣವನ್ನು ತೆಗೆದುಹಾಕಲು ಇದುವೇ ಸುಲಭವಾದ ಮಾರ್ಗ! ಟ್ರೈ ಮಾಡಿ ನೋಡಿ.. holi color  

holi color  : ಹೋಳಿ ಹಬ್ಬದಂದು ಜನರು ಬಹಳ ಉತ್ಸಾಹದಿಂದ ಪರಸ್ಪರ ಬಣ್ಣಗಳನ್ನು ಎರಚಿಕೊಳ್ಳುತ್ತಾರೆ.  ಮಾರುಕಟ್ಟೆಯಲ್ಲಿ ಶಾಶ್ವತ…