ದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ದೆಹಲಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ಭಕ್ತರು, ರೈಲು ಬಂದಿದ್ದೇ ತಡ ಏಕಾಏಕಿ ಹತ್ತಲು ಹೋದ ಹಿನ್ನೆಲೆ ಕಾಲ್ತುಳಿತ ಉಂಟಾಗಿ, 15 ಮಂದಿ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಹುಮಾನ ಮೊತ್ತ ಶೇ.53 ಏರಿಕೆ: ಪ್ರತಿ ತಂಡಕ್ಕೆ ಕನಿಷ್ಠ ₹1.08 ಕೋಟಿ ಗ್ಯಾರಂಟಿ!
ರೈಲು ಬರುವುದು ಸ್ವಲ್ಪ ಸಮಯ ತಡವಾದ ಹಿನ್ನೆಲೆ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಫ್ಲಾಟ್ಫಾರ್ಮ್ನಲ್ಲಿ ಕಾಯುತ್ತಿದ್ದರು. ಈ ವೇಳೆ ರೈಲು ಬಂದಿದ್ದೇ ತಡ ಹತ್ತಲು ಮುಗಿಬಿದ್ದಿದ್ದಾರೆ. ಭಾರೀ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದೇ ಆದರೂ ದುರಾದೃಷ್ಟವಶಾತ್ 15 ಮಂದಿ ಕೂಡ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರ ಪೈಕಿ 11 ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ಹೇಳಲಾಗಿದೆ. ಇನ್ನೂ ಹಲವರು ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.