ದೆಹಲಿಯಲ್ಲಿ ರೈಲು ಹತ್ತುವ ವೇಳೆ ಕಾಲ್ತುಳಿತ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 15 ಭಕ್ತರು ದುರ್ಮರಣ

blank

ದೆಹಲಿ: ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ದೆಹಲಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ಭಕ್ತರು, ರೈಲು ಬಂದಿದ್ದೇ ತಡ ಏಕಾಏಕಿ ಹತ್ತಲು ಹೋದ ಹಿನ್ನೆಲೆ ಕಾಲ್ತುಳಿತ ಉಂಟಾಗಿ, 15 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಹುಮಾನ ಮೊತ್ತ ಶೇ.53 ಏರಿಕೆ: ಪ್ರತಿ ತಂಡಕ್ಕೆ ಕನಿಷ್ಠ ₹1.08 ಕೋಟಿ ಗ್ಯಾರಂಟಿ!

ರೈಲು ಬರುವುದು ಸ್ವಲ್ಪ ಸಮಯ ತಡವಾದ ಹಿನ್ನೆಲೆ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಫ್ಲಾಟ್​ಫಾರ್ಮ್​ನಲ್ಲಿ ಕಾಯುತ್ತಿದ್ದರು. ಈ ವೇಳೆ ರೈಲು ಬಂದಿದ್ದೇ ತಡ ಹತ್ತಲು ಮುಗಿಬಿದ್ದಿದ್ದಾರೆ. ಭಾರೀ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದೇ ಆದರೂ ದುರಾದೃಷ್ಟವಶಾತ್​ 15 ಮಂದಿ ಕೂಡ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರ ಪೈಕಿ 11 ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ಹೇಳಲಾಗಿದೆ. ಇನ್ನೂ ಹಲವರು ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

 

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…