More

    ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಫುಟ್​ಪಾತ್​ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್​ ಹರಿದು 15 ಜನ ಸಾವು!

    ಸೂರತ್​: ಫುಟ್​ಪಾತ್​ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್​​ ಹರಿದು 15 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

    ಟ್ರಕ್​ ಮತ್ತು ಕಬ್ಬು ತುಂಬಿದ ಟ್ರ್ಯಾಕ್ಟರ್​ ನಡುವೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಟ್ರಕ್​ ಡ್ರೈವರ್​, ಫುಟ್​ಪಾತ್​ ಕಡೆ ವಾಹನವನ್ನು ನುಗ್ಗಿಸಿದ್ದಾನೆ. ಈ ವೇಳೆ ಸವಿನಿದ್ದೆಯಲ್ಲಿದ್ದ 15 ವಲಸೆ ಕಾರ್ಮಿಕರ ಮೇಲೆ ಟ್ರಕ್​ ಹರಿದು ಮೃತಪಟ್ಟಿದ್ದಾರೆ. ಕಾರ್ಮಿಕರು ಮಾಂಡವಿ ಹೆದ್ದಾರಿಯ ಫುಟ್​ಪಾತ್​ ಮೇಲೆ ಮಲಗಿದ್ದಾಗ ದುರ್ಘಟನೆ ಸಂಭವಿಸಿದೆ.

    ಇದನ್ನೂ ಓದಿರಿ: ಪಂಚರ್​ ಟೈಯರ್​ನಲ್ಲೇ ಪತ್ನಿ ಮನೆಗೆ ಪ್ರಯಾಣ ಬೆಳೆಸಿದ ಯುವಕನಿಗೆ ಕಾದಿತ್ತು ಶಾಕ್​! ಅಪಘಾತವಂತೂ ಅಲ್ಲ

    ಮೃತರೆಲ್ಲರು ರಾಜಸ್ಥಾನದ ಬನ್​ಸ್ವಾರ ಮೂಲದವರೆಂದು ತಿಳಿದುಬಂದಿದೆ. ಮೃತರ ಸಾವಿಗೆ ಬಿಜೆಪಿ ಮುಖಂಡ ಹಾಗೂ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾವಿನ ದುಃಖ ತಡೆದುಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸಿಕೊಳ್ಳುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ. (ಏಜೆನ್ಸೀಸ್​)

    ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ!

    ಇದು ಗಂಡ-ಹೆಂಡತಿ, ಅಕ್ಕ-ತಂಗಿಯಿಂದ ಹನಿಟ್ರ್ಯಾಪ್​; ಫೇಸ್​ಬುಕ್​ ಮೂಲಕ ಹಾಕುತ್ತಾರೆ ಗಾಳ…

    VIDEO| ಮೈಕಲ್​ ಜಾಕ್ಸನ್​ ಮೂನ್​ ವಾಕ್​ ಮೂಲಕ ಸಂಚಾರ ನಿರ್ವಹಿಸೋ ಪೇದೆಯ ಹಿಂದಿದೆ ಕಣ್ಣೀರ ಕತೆ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts