ಸೂರತ್: ಫುಟ್ಪಾತ್ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದು 15 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಟ್ರಕ್ ಮತ್ತು ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಟ್ರಕ್ ಡ್ರೈವರ್, ಫುಟ್ಪಾತ್ ಕಡೆ ವಾಹನವನ್ನು ನುಗ್ಗಿಸಿದ್ದಾನೆ. ಈ ವೇಳೆ ಸವಿನಿದ್ದೆಯಲ್ಲಿದ್ದ 15 ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದು ಮೃತಪಟ್ಟಿದ್ದಾರೆ. ಕಾರ್ಮಿಕರು ಮಾಂಡವಿ ಹೆದ್ದಾರಿಯ ಫುಟ್ಪಾತ್ ಮೇಲೆ ಮಲಗಿದ್ದಾಗ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿರಿ: ಪಂಚರ್ ಟೈಯರ್ನಲ್ಲೇ ಪತ್ನಿ ಮನೆಗೆ ಪ್ರಯಾಣ ಬೆಳೆಸಿದ ಯುವಕನಿಗೆ ಕಾದಿತ್ತು ಶಾಕ್! ಅಪಘಾತವಂತೂ ಅಲ್ಲ
ಮೃತರೆಲ್ಲರು ರಾಜಸ್ಥಾನದ ಬನ್ಸ್ವಾರ ಮೂಲದವರೆಂದು ತಿಳಿದುಬಂದಿದೆ. ಮೃತರ ಸಾವಿಗೆ ಬಿಜೆಪಿ ಮುಖಂಡ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾವಿನ ದುಃಖ ತಡೆದುಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸಿಕೊಳ್ಳುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ. (ಏಜೆನ್ಸೀಸ್)
ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ!
ಇದು ಗಂಡ-ಹೆಂಡತಿ, ಅಕ್ಕ-ತಂಗಿಯಿಂದ ಹನಿಟ್ರ್ಯಾಪ್; ಫೇಸ್ಬುಕ್ ಮೂಲಕ ಹಾಕುತ್ತಾರೆ ಗಾಳ…
VIDEO| ಮೈಕಲ್ ಜಾಕ್ಸನ್ ಮೂನ್ ವಾಕ್ ಮೂಲಕ ಸಂಚಾರ ನಿರ್ವಹಿಸೋ ಪೇದೆಯ ಹಿಂದಿದೆ ಕಣ್ಣೀರ ಕತೆ..!