ತಿರುಮಲ: ವಿಶ್ವಪ್ರಸಿದ್ಧ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ 50 ಅರ್ಚಕರ ಪೈಕಿ 15 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೆ, ಇನ್ನೂ 25 ಅರ್ಚಕರ ಕೋವಿಡ್-19 ಪರೀಕ್ಷಾ ಫಲಿತಾಂಶವನ್ನು ನಿರೀಕ್ಷಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೇವರ ದರ್ಶನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವಂತೆ ಕೋರಿ ಟಿಟಿಡಿ ಸಿಬ್ಬಂದಿ ಮತ್ತು ಕೆಲಸಗಾರರ ಏಕೀಕೃತ ಒಕ್ಕೂಟ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿಗೆ ಲಿಖಿತ ಮನವಿ ಸಲ್ಲಿಸಿದೆ. ಈ ಬಗ್ಗೆ ಚರ್ಚಿಸಲು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ (ಟಿಟಿಡಿ) ತುರ್ತು ಸಭೆ ನಡೆಸಲು ನಿರ್ಧರಿಸಿದೆ.
ಇದನ್ನೂ ಓದಿ: ಕರೊನಾ ಚಿಕಿತ್ಸೆನೂ ಕೊಟ್ಟರು, ಕೋಟಿ ಶುಲ್ಕನೂ ಬಿಟ್ಟರು, ವಿಮಾನಕ್ಕೂ ಕಳುಹಿಸಿದರು!
ಇದುವರೆಗೆ ಟಿಟಿಡಿಯ 91 ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಜು.10ರವರೆಗೆ ತಿರುಮಲದಲ್ಲಿ ಕಾರ್ಯನಿರ್ವಹಿಸುವ ಟಿಟಿಡಿಯ 1,865 ಸಿಬ್ಬಂದಿ, ಅಲ್ಲಿರಿಯಲ್ಲಿನ ಟಿಟಿಡಿಯ 1,704 ಹಾಗೂ 631 ಭಕ್ತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರೆಲ್ಲರ ಪೈಕಿ 91 ಜನರಿಗೆ ಕರೊನಾ ಸೋಂಕು ತಗುಲಿರುವುದು ಪತ್ತೆಯಾಗಿರುವುದಾಗಿ ಟಿಟಿಡಿ ಹೇಳಿತ್ತು.
ಭಕ್ತರಲ್ಲಿ ಯಾರಿಗೂ ಆರೋಗ್ಯ ಸಮಸ್ಯೆ ಇರಲಿಲ್ಲ. ಅವರು ಮನೆಗೆ ಮರಳಿದ ನಂತರದಲ್ಲೂ ನಾವು ಅವರಿಗೆ ಕರೆ ಮಾಡಿ, ಅವರ ಆರೋಗ್ಯ ವಿಚಾರಿಸುತ್ತಿದ್ದೇವೆ. ಈ ರೀರಿಯಾಗಿ ಜೂ.18ರಿಂದ 24ರವರೆಗೆ 700 ಹಾಗೂ ಜು.1ರಿಂದ 7ರವರೆಗೆ 1,943 ಭಕ್ತರಿಗೆ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದೇವೆ ಎಂದು ಟಿಟಿಡಿ ಹೇಳಿತ್ತು.
ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದು ಶ್ರೀರಾಮುಲು ಹೇಳಿದ್ದೇಕೆ ಗೊತ್ತಾ?