ಪಂಜಾಬ್: ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮರ ವಿರುದ್ಧ ನಡುರಸ್ತೆಯಲ್ಲೇ ಹೋರಾಡಿ ಕಳ್ಳನೊಬ್ಬನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದ 15ರ ಬಾಲಕಿಯ ಸಹಾಸಕ್ಕೆ ದೇಶದಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರ ಬೆನ್ನಲ್ಲೇ ಆಕೆಯ ಧೈರ್ಯಕ್ಕೆ ಶೌರ್ಯ ಪ್ರಶಸ್ತಿ ಲಭಿಸುವ ಸಾಧ್ಯತೆಯೂ ದಟ್ಟವಾಗಿದೆ. ಈ ನಡುವೆ ಆಕೆಗೆ ಬಂಬರ್ ಬಹುಮಾನವೂ ಸಿಕ್ಕಿದೆ.
ಪಂಜಾಬ್ನ ಜಲಂಧರ್-ಕಪುರ್ಥಾಲಾ ರಸ್ತೆ ಬಳಿಯ ದೀನ್ ದಯಾಳ್ ಉಪಾಧ್ಯಾಯ ನಗರದಲ್ಲಿ ಆ.30ರಂದು ಕುಸುಮ್ ಕುಮಾರ್ ಎಂಬ ಹದಿನೈದು ವರ್ಷದ ಬಾಲಕಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಳು. ಈ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಬಾಲಕಿ ಕೈಯಲ್ಲಿದ್ದ ಮೊಬೈಲ್ ಕಸಿದುಕೊಂಡು ಆಕೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರೂ ಧೈರ್ಯದಿಂದ ಹೋರಾಡಿ ಕಳ್ಳನೊಬ್ಬನನ್ನು ಹಿಡಿಯುವಲ್ಲಿ ಬಾಲಕಿ ಯಶಸ್ವಿಯಾದಳು. ಕುಸುಮ್ಳ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಶೌರ್ಯ ಪ್ರಶಸ್ತಿಗೆ ಬಾಲಕಿಯ ಹೆಸರು ಕಳುಹಿಸುವುದಾಗಿ ಪೊಲೀಸ್ ಆಯುಕ್ತ ಗುರ್ಪ್ರೀತ್ ಸಿಂಗ್ ಭುಲ್ಲರ್ ತಿಳಿಸಿದ್ದಾರೆ. ಇದನ್ನೂ ಓದಿರಿ video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ
ಕಳ್ಳರ ಹಲ್ಲೆಯಿಂದ ಗಾಯಗೊಂಡಿದ್ದ ಕುಸುಮ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಕೂಲಿಕಾರ ಸಾಧು ರಾಮ್ ಅವರ ಮಗಳು ಕುಸುಮ್ಳ ಸಾಹಸವನ್ನು ಗೌರವಿಸಿ ಜಿಲ್ಲಾಧಿಕಾರಿ ಘನಶ್ಯಾಮ್ ಥೋರಿ ಅವರು 51,000 ರೂ. ನಗದು ಬಹುಮಾನ ಘೋಷಿಸಿದ್ದಾರೆ. ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಹಣ ಬಳಸಿಕೊಂಡು ಕುಸುಮ್ಗೆ ನಗದು ಪ್ರಶಸ್ತಿ ನೀಡಲಾಗುವುದು ಎಂದು ಥೋರಿ ತಿಳಿಸಿದ್ದಾರೆ.
ಇನ್ನು ಧೈರ್ಯಶಾಲಿ ಕುಸುಮ್ ಹೆಸರಿನ ಮ್ಯಾಸ್ಕಾಟ್ ಅನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು. ಈ ಬಗ್ಗೆ ಅವರ ಕುಟುಂಬದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಗುರ್ಮಿಂದರ್ ಸಿಂಗ್ ರಾಂಧವಾ ತಿಳಿಸಿದ್ದಾರೆ.
ಎಲ್ಲವೂ ಸರ್ವನಾಶವಾಯ್ತು… ಎಂದು ಗೋಳಾಡುತ್ತಿದ್ದ ರೈತನಿಗೆ ಪಿಎಸ್ಐ ಕೊಟ್ರು ಅಚ್ಚರಿಯ ಉಡುಗೊರೆ!
video/ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿ ಮೊಬೈಲ್ ಕಳ್ಳನನ್ನು ಹಿಡಿದ 15ರ ಬಾಲಕಿ