ಚಿತ್ರದುರ್ಗ:ಅನಧಿಕೃತವಾಗಿ ಸಾಗಿಸುತ್ತಿದ್ದ 150 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ಹೊಳಲ್ಕೆರೆ ಮಲಾಡಿಹಳ್ಳಿ ಬಳಿ ಶನಿವಾರ ವಶಕ್ಕೆ ಪಡೆಯಲಾಗಿ ದೆ. ಖಚಿತ ಮಾಹಿತಿ ಆಧರಿಸಿ ಹೊಳಲ್ಕೆರೆ ಠಾಣೆ ಪಿಎಸ್ಐ ಸುರೇಶ್ ಮತ್ತವರ ತಂಡದ ಸಿಬ್ಬಂದಿ ಲಾರಿ ಮತ್ತು ಅಕ್ಕಿಯನ್ನು ವಶ ಪಡೆದಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಆಹಾರ ಶಿರಸ್ತೇದಾರ್ ಲಿಂಗರಾಜು ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಕಿಯನ್ನು ಚನ್ನಗಿರಿಯಿಂದ ಬೆಂಗಳೂರು ಹಾಗೂ ಮಂಡ್ಯಕ್ಕೆ ಸಾಗಿಸಲಾಗುತ್ತಿತ್ತು.