ತೆಲಂಗಾಣ: ಹದಿನಾರು ವರ್ಷದ ಬಾಲಕನೊಬ್ಬ ತರಗತಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮ ಪುತ್ರನ ಆತ್ಮಹತ್ಯೆಗೆ ಶಾಲೆಯವರ ಹಿಂಸೆಯೇ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ. ತೆಲಂಗಾಣದ ನರಸಿಂಗಿಯಲ್ಲಿ ಈ ಪ್ರಕರಣ ನಡೆದಿದೆ.
ಈತ ನರಸಿಂಗಿಯಲ್ಲಿನ ಶ್ರೀಚೈತನ್ಯ ಜೂನಿಯರ್ ಕಾಲೇಜಿನಲ್ಲಿ ಫಸ್ಟ್ ಇಂಟರ್ಮೀಡಿಯೇಟ್ ವಿದ್ಯಾರ್ಥಿಯಾಗಿದ್ದ. ತಮ್ಮ ಮಗನ ಸಾವಿಗೆ ಜೂನಿಯರ್ ಕಾಲೇಜಿನ ಆಡಳಿತ ಮಂಡಳಿಯ ಹಿಂಸೆಯೇ ಕಾರಣ ಎಂದು ಪಾಲಕರು ಆರೋಪಿಸಿದ್ದರಿಂದ ಕಾಲೇಜಿನ ವಿರುದ್ಧ ಕೇಸು ದಾಖಲಾಗಿದೆ.
ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ಈ ಪ್ರಕರಣ ಕಾಲೇಜಿನಲ್ಲಿ ನಿನ್ನೆ ನಡೆದಿತ್ತು. ಮತ್ತೊಂದೆಡೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿನ ವೈದ್ಯಕೀಯ ಕಾಲೇಜೊಂದರ ಯುವತಿ ಅಲ್ಲಿನ ತನ್ನ ಸೀನಿಯರ್ಸ್ ಹಿಂಸೆ ತಾಳಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಆ ವೈದ್ಯನನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಿಗೇ ಇಂಥದ್ದೊಂದು ಆತ್ಮಹತ್ಯೆ ಸಂಭವಿಸಿರುವುದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಿದೆ.
ಇದನ್ನೂ ಓದಿ: ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ