ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ಮಾಡುತ್ತಿದ್ದು, ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದ್ದು, 17 ಶೇಕಡಾ ವೇತನ ಹೆಚ್ಚಳಕ್ಕೆ ನಿರ್ಧರಿಸಿದ್ದಾರೆ. ಎನ್ಪಿಎಸ್ ವಿಚಾರ ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂಬುದರ ಬಗ್ಗೆ ವರದಿ ತರಿಸಿಕೊಳ್ಳುತ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರಿಸಿಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಭರವಸೆ ಹಿಂದೆಯೂ ಕೊಟ್ಟಿದ್ದಾರೆ. ಪ್ರತಿ ಬಾರಿಯೂ ಭರವಸೆ ಕೊಟ್ಟರೆ ನಾವು ಕೇಳಲ್ಲ. ಆದೇಶ ಆದ ಮೇಲೆ ನಾವು ನಿರ್ಧಾರ ಹೇಳುತ್ತೇವೆ. ವಿಧಾನಸೌಧಕ್ಕೆ ಸದ್ಯ ಹೋಗುತ್ತಿದ್ದು, ಆದೇಶ ಪ್ರತಿ ನೋಡಿ ಪ್ರತಿಕ್ರಿಯಿಸುತ್ತೇನೆ ಎಂದು ನೌಕರರ ಸಂಘದ ಕಚೇರಿ ಬಳಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.