ಚಿತ್ರದುರ್ಗ: ಜಿಲ್ಲಾಡಳಿತದಿಂದ ನಗರದಲ್ಲಿ ನ.30ರಂದು ಆಯೋಜಿಸಿರುವ ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ನ.18 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಡಿಸಿ ಜಿಆರ್ಜೆ ದಿವ್ಯಾಪ್ರಭು ಅವರು ಸಭೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಕೋರಿದ್ದಾರೆ.