19 ರಿಂದ ಶಿವ ಸಂಚಾರ ನಾಟಕೋತ್ಸವ

blank

ಚಿತ್ರದುರ್ಗ: ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕದಳಿ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಗರದ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ನ.19 ರಿಂದ 3 ದಿನಗಳ ಕಾಲ ಸಂಜೆ 6 ಗಂಟೆಗೆ ಕನ್ನಡ ರಾಜ್ಯೋತ್ಸವ, ಮಕ್ಕಳ ಕಲರವ ಮತ್ತು ಶಿವಸಂಚಾರ ನಾಟಕೋತ್ಸವ ಏರ್ಪಡಿಸಲಾಗಿದೆ. 19 ರಂದು ಬಿ.ಆರ್.ಪೊಲೀಸ್ ಪಾಟೀಲ್ ರಚಿತ ನಾಟಕ ತುಲಾಭಾರ ವಿಶ್ವೇಶ್ವರಿ ಹಿರೇಮಠ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರದ ಕಲಾವಿದರು ಅಭಿನಯಿಸಲಿದ್ದಾರೆ.
20 ರಂದು ಟಿ.ಕೆ.ರಾಮರಾವ್ ಮೂಲ ಕಾದಂಬರಿ, ಗಣೇಶ ಅಮೀನಗಡ ನಾಟಕಕ್ಕೆ ರೂಪಾಂತರಿಸಿರುವ, ವೈ.ಡಿ.ಬದಾಮಿ ನಿರ್ದೇಶನದ ಬಂಗಾರದ ಮನುಷ್ಯ ನಾಟಕ ಪ್ರದರ್ಶನ ನಡೆಯಲಿದೆ. 21 ರಂದು ಸಂಜೆ 6 ಕ್ಕೆ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಚಿಸಿರುವ ಮಹಾದೇವ ಹಡಪದ ನಿರ್ದೇಶನದಲ್ಲಿ ಕೋಳೂರು ಕೊಡಗೂಸು ನಾಟಕ ಪ್ರದರ್ಶನವಾಗಲಿದೆ ಎಂದು ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ತಿಳಿಸಿದ್ದಾರೆ.
—-

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…