ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸರ ಗಣನೀಯ ಸೇವೆ ಪರಿಗಣಿಸಿ ನೀಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 19 ಪೊಲೀಸ್ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.
ಕೇಂದ್ರ ಗೃಹ ಇಲಾಖೆಯು ರಾಷ್ಟ್ರ ಪದಕಕ್ಕೆ ಆಯ್ಕೆಯಾದವರನ್ನು ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ಯಾದು, ಸ್ವಾತಂತ್ರ್ಯ ದಿನಾಚರಣೆ ದಿನದಂದು ಈ ಪದಕ ಪ್ರದಾನ ಮಾಡಲಾಗುತ್ತದೆ. ಲೋಕಾಯುಕ್ತ ಸಂಸ್ಥೆ ಅಕ್ರಮ ಪ್ರಕರಣದ ತನಿಖೆ ನಡೆಸಿದ ಎಸ್ಐಟಿ ತಂಡದಲ್ಲಿ ಸೇವೆ ಸಲ್ಲಿಸಿದ ಸಿಐಡಿ ಸಹಾಯಕ ಸಬ್ಇನ್ಸ್ಪೆಕ್ಟರ್ ವಿ.ಎಲ್.ಎನ್. ಪ್ರಸನ್ನಕುಮಾರ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಲಭಿಸಿದೆ. ಶ್ಲಾಘನೀಯ ಸೇವಾ ಪದಕ 18 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಭಿಸಿದೆ. ಆ ಮೂಲಕ ರಾಜ್ಯದ ಒಟ್ಟು 19 ಪೊಲೀಸರಿಗೆ ಈ ಬಾರಿ ಪ್ರಶಸ್ತಿ ಲಭಿಸಿದೆ.
ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದವರ ಪಟ್ಟಿ ಹೀಗಿದೆ.
1. ಹೇಮಂತ್ ಕುಮಾರ್- ಡಿವೈಎಸ್ಪಿ, ಲೋಕಾಯುಕ್ತ, ಬೆಂಗಳೂರು.
2. ಪರಮೇಶ್ವರ ಹೆಗ್ಡೆ- ಡಿವೈಎಸ್ಪಿ, ಆಥಿರ್ಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು.
3. ಆರ್.ಮಂಜುನಾಥ್- ಡಿವೈಎಸ್ಪಿ, ಎಸಿಬಿ, ಮಂಡ್ಯ.
4. ಎಚ್.ಎಂ.ಶೈಲೇಂದ್ರ- ಡಿವೈಎಸ್ಪಿ, ಸೋಮವಾರಪೇಟೆ ವಿಭಾಗ, ಕೊಡಗು.
5. ಅರುಣ್ ನಾಗೇಗೌಡ- ಡಿವೈಎಸ್ಪಿ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ.
6. ಎಚ್.ಎಂ. ಸತೀಶ್- ಎಸಿಪಿ, ಈಶಾನ್ಯ ಸಂಚಾರ ವಿಭಾಗ, ಬೆಂಗಳೂರು.
7. ಎಚ್.ಬಿ. ರಮೇಶ್ ಕುಮಾರ್- ಡಿವೈಎಸ್ಪಿ, ರಾಜ್ಯ ಗುಪ್ತಚರ, ತುಮಕೂರು.
8. ಪಿ. ಉಮೇಶ್- ಡಿವೈಎಸ್ಪಿ, ಪೊಲೀಸ್ ತರಬೇತಿ ಶಾಲೆ, ಜ್ಯೋತಿನಗರ, ಮೈಸೂರು.
9. ಸಿ.ಎನ್. ದಿವಾಕರ- ಇನ್ಸ್ಪೆಕ್ಟರ್, ಮಡಿಕೇರಿ ಗ್ರಾಮೀಣ ವೃತ್ತ, ಕೊಡಗು.
10. ಜಿ.ಎನ್. ರುದ್ರೇಶ್- ಇನ್ಸ್ಪೆಕ್ಟರ್, ಕೆಎಸ್ಆರ್ಪಿ, ಬೆಂಗಳೂರು.
11. ಬಿ.ಎ. ಲಕ್ಷ್ಮೀನಾರಾಯಣ್- ಪಿಎಸ್ಐ, ನಗರ ವಿಶೇಷ ವಿಭಾಗ, ಬೆಂಗಳೂರು.
12. ಎಚ್.ಎಂ.ಚಂದ್ರಶೇಖರ್- ಪಿಎಸ್ಐ, ಕೆಎಸ್ಆರ್ಪಿ, ಬೆಂಗಳೂರು.
13. ಕೆ. ಜಯಪ್ರಕಾಶ್- ಪಿಎಸ್ಐ, ಮಂಗಳೂರು ನಗರ, ನಿಯಂತ್ರಣ ಕೊಠಡಿ.
14.ಎಚ್. ನಂಜುಂಡಯ್ಯ- ಎಎಸ್ಐ, ಡಿಸಿಆರ್ಬಿ, ಎಸ್ಪಿ ಕಚೇರಿ, ಚಿಕ್ಕಬಳ್ಳಾಪುರ.
15. ಹತೀಕ್ ಯು.ಆರ್. ರೆಹಮಾನ್- ಎಎಸ್ಐ, ಬೆರಳಚ್ಚು ವಿಭಾಗ, ಶಿವಮೊಗ್ಗ.
16. ರಾಮಾಂಜನೇಯ- ಎಎಸ್ಐ, ಕೆ.ಬಿ.ಕ್ರಾಸ್ ಪೊಲೀಸ್ ಠಾಣೆ, ತುಮಕೂರು.
17. ಆರ್.ಎನ್. ಬಾಳೆಕಾಯಿ- ಎಎಸ್ಐ, ರಾಣೇಬೆನ್ನೂರು ಗ್ರಾಮೀಣ ಠಾಣೆ, ಹಾವೇರಿ ಜಿಲ್ಲೆ.
18. ಕೆ. ಹೊನ್ನಪ್ಪ- ಮುಖ್ಯಪೇದೆ, ಬೆಂಗಳೂರು ಜಿಲ್ಲೆ.