More

    ದೂರು ದಾಖಲಿಸದೆ ಇರಲು ಲಂಚ ಪಡೆದ ಆರೋಪ; ಇಬ್ಬರು ED ಅಧಿಕಾರಿಗಳು ಅರೆಸ್ಟ್

    ಜೈಪುರ: ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ದೂರು ದಾಶಖಲಿಸದೆ ಇರಲು ಲಂಚ ಪಡೆದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳನ್ನು ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ.

    ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸದೆ ಇರಲು ಮಧ್ಯವರ್ತಿ ಒಬ್ಬರಿಂದ 17 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಗಳಿಬ್ಬರು ಸಿಕ್ಕಿಬಿದ್ದಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರ ಪೈಕಿ ಓರ್ವ ಅಧಿಕಾರಿಯ ಹೆಸರು ನವಲ್​ ಕಿಶೋರ್ ಮೀನಾ ಎಂದು ತಿಳಿದು ಬಂದಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ACBಯ ಹಿರಿಯ ಅಧಿಕಾರಿಯೊಬ್ಬರು ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸದೆ ಇರಲು ಇಬ್ಬರು ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಪರಿಶೀಲನೆ ನಡೆಸಿದಾಗ ಇಬ್ಬರು ಅಧಿಕಾರಿಗಳು 17 ಲಕ್ಷ ರೂಪಾಯಿ ಹಣ ತೆಗೆದುಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ACBಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts