ನವದೆಹಲಿ: ಇಸ್ಲಾಮಾಬಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ ಅಧಿಕಾರಿಗಳು ಅಪಹರಿಸಿದ್ದಾರೆ. ಭಾರತದ ವಿರುದ್ಧ ಸೇಡಿನ ಕ್ರಮವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ.
ಸೋಮವಾರ ಬೆಳಗ್ಗೆ ಇಬ್ಬರು ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿ ತಲುಪಿಲ್ಲ. ಇದರಿಂದ ಆತಂಕಗೊಂಡ ಅಧಿಕಾರಿಗಳು ನವದೆಹಲಿಯಲ್ಲಿರುವ ಭಾರತೀಯ ವಿದೇಶಾಂಗ ಕಚೇರಿಯ ಹಿರಿಯ ಅಧಿಕಾರಿಗಳು ಹಾಗೂ ಇಸ್ಲಾಮಾಬಾದ್ನ ಪಾಕ್ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಪಾಕ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ; ಮಹಿಳೆಯರಿಗಿನ್ನು ಹದಿನೆಂಟಲ್ಲ, ಮದುವೆ ವಯಸ್ಸು 21…!
ಪಾಕಿಸ್ತಾನದ ಗುಪ್ತಚರ ಇಲಾಖೆ ಇಬ್ಬರನ್ನು ಅಪಹರಿಸಿದ್ದು, ‘ಗೂಢಚಾರರು’ ಎಂಬ ಹಣೆಪಟ್ಟಿ ಕಟ್ಟಲು ಈ ಕೃತ್ಯ ಎಸಗಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಕಳೆದ ಮೇ 31ರಂದು ಗೂಢಚಾರ ಎಸಗುತ್ತಿದ್ದ ನವದೆಹಲಿಯ ಪಾಕ್ ರಾಯಭಾರ ಕಚೇರಿಯ ಸಹಾಯಕ ಸಿಬ್ಬಂದಿ ಅಬಿದ್ ಹುಸೇನ್ ಅಬಿದ್, ಗುಮಾಸ್ತ ಮಹಮ್ಮದ್ ತಾಹೀರ್ ಖಾನ್ ಹಾಗೂ ಚಾಲಕ ಜಾವೀದ್ ಹುಸೇನ್ ಎಂಬುವರನ್ನು ಬಂಧಿಸಲಾಗಿತ್ತು. ಇವರು, ರಕ್ಷಣಾ ಇಲಾಖೆ ರೈಲ್ವೆ ಇಲಾಖೆ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿದ್ದು, ರಹಸ್ಯ ಮಾಹಿತಿ ಕಲೆ ಹಾಕಿದ್ದರು. ಬಳಿಕ ಇವರನ್ನು ಪಾಕ್ಗೆ ವಾಪಸ್ ಕಳುಹಿಸಲಾಗಿತ್ತು. ಇದರ ವಿರುದ್ಧ ಪಾಕ್ ಸೇಡು ತೀರಿಸಿಕೊಳ್ಳಲು ಮುಂದಾಗಿದೆ ಎಂದೇ ವಿಶ್ಲೇಷಿಸಲಾಗಿದೆ.
ಇದನ್ನೂ ಓದಿ; ವೃದ್ಧನ ಕರೊನಾ ಚಿಕಿತ್ಸೆಗೆ ಖರ್ಚಾದ ಮೊತ್ತದಿಂದ ಆಸ್ಪತ್ರೆಯನ್ನೇ ಕಟ್ಟಿಸಬಹುದಿತ್ತು…!
ಪಾಕ್ ಐಎಸ್ಐ ಅಧಿಕಾರಿಗಳು ಬಂಧಿತರಿಗೆ ಚಿತ್ರಹಿಂಸೆ ನೀಡುವಲ್ಲಿ ಎತ್ತಿದ ಕೈ. ಹೀಗಾಗಿ ಭಾರತೀಯ ಅಧಿಕಾರಿಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತವಾಗಿದೆ.
ಬದುಕು ಕ್ಷಣಿಕ ಎಂದಿದ್ದೇಕೆ ಸುಶಾಂತ್ ಸಿಂಗ್; ಅಮ್ಮನ ನೆನೆದು ಬಾರದ ಲೋಕಕ್ಕೆ ಪಯಣ