More

    ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಬಡಿದ ಸಿಡಿಲು; ಇಬ್ಬರು ಸಾವು, ಮೂವರು ಚಿಂತಾಜನಕ

    ರಾಂಚಿ: ಸ್ಥಳೀಯ ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಪ್ರೇಕ್ಷಕರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ಶಿವಲಾಲ್ ಸೊರೇನ್​ (32), ಸಂತಲಾಲ್​ ಹೆಂಬ್​ರಾಮ್​ (20) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಗಾಯಗೊಂಡಿರುವವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಮಣಿಪುರ ಹಿಂಸಾಚಾರ; ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಇನ್ನೂ ಪತ್ತೆಯಾಗದ ಮೃತದೇಹ

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಶನಿವಾರ ಸಂಜೆ ಫುಟ್​ಬಾಲ್​ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಸುರಿದ ಪರಿಣಾಮ ಮೈದಾನದಲ್ಲಿದ್ದ ಪ್ರೇಕ್ಷಕರು ಆಶ್ರಯ ಪಡೆಯಲೆಂದು ಪಕ್ಕದ ಶೆಡ್​ ಒಂದಕ್ಕೆ ತೆರಳಿದ್ದಾರೆ. ಈ ವೇಳೆ ಸಿಡಿಲು ಬಡಿದಿದ್ದು, ಅದರ ಪರಿಣಾಮವಾಗಿ ಇಬ್ಬರು ಪ್ರೇಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮೂವರು ಪ್ರೇಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸರೈಯಾಹತ್​ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts