More

    ಬೀಗ ಮುರಿದು 2 ಲಕ್ಷ ರೂ. ಕಳವು

    ಚಿಕ್ಕಮಗಳೂರು: ಮಗನ ಮದುವೆಗೆಂದು ಬೆಂಗಳೂರಿಗೆ ತೆರಳಿದ್ದ ನಗರದ ಗೌರಿ ಕಾಲುವೆ ವಿನಾಯಕ ರಸ್ತೆಯ ನಿವಾಸಿ ನಾಗಭೂಷಣ್ ಭಟ್ ಅವರ ಮನೆಯ ಬಾಗಿಲು ಮುರಿದು ಕಳ್ಳರು ಮನೆಯಲ್ಲಿದ್ದ 2 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
    ಮನೆಗೆ ಬೀಗ ಹಾಕಿ ಎದುರು ಮನೆಗೆ ಬೀಗ ಕೊಟ್ಟ ನಾಗಭೂಷಣ್ ಅವರು ಎರಡು ದಿನದ ಹಿಂದೆ ಮಗನ ಮದುವೆಗೆ ಬೆಂಗಳೂರಿಗೆ ತೆರಳಿದ್ದರು. ಶನಿವಾರ ರಾತ್ರಿ ಮನೆಯ ಬೀಗ ಮುರಿದು ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಬೀರುವಿನಲ್ಲಿಟ್ಟಿದ್ದ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.
    ಭಾನುವಾರ ಬೆಳಗ್ಗೆ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಎದುರು ಮನೆಯವರು ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ವಿಷಯವನ್ನು ನಾಗಭೂಷಣ್ ಭಟ್ ಅವರಿಗೆ ತಿಳಿಸಿದ್ದು ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts