ಶ್ರೀನಗರ: ಗಡಿ ನಿಯಂತ್ರಣ ರೇಖೆ (LOC) ಮೂಲಕ ಭಾರತವನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ನ ಕುಮ್ಕಾಡಿ ಪ್ರದೇಶದಲ್ಲಿ ನಡೆದಿದೆ.
ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಬಳಿಕ ಸೇನೆ ಕೊಂಬಿಂಗ್ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಮೃತ ಭಯೋತ್ಪಾದಕರ ಬಳಿ ಇದ್ದ ಶಸ್ತ್ರಾಸ್ತ್ರ ಹಾಗೂ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಗಡಿ ನಿಯಂತ್ರಣ ರೇಖೆ ಮೂಲಕ ಭಾರೀ ಸ್ಪೋಟಕ ಹಾಗೂ ಶಸ್ತ್ರಾಸ್ತ್ರಗಳ ಮೂಲಕ ಭಾರತವನ್ನು ಅಕ್ರಮವಾಗಿ ಪ್ರವೇಶಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.