ಬೆಳಗಾವಿ: ಬಿಜೆಪಿ ಯುವ ಮುಖಂಡನೋರ್ವನ ನಿರ್ಲಕ್ಷ್ಯಕ್ಕೆ ಇಬ್ಬರು ಮಹಿಳೆಯರು ಜೀವವನ್ನೇ ಕಳೆದುಕೊಂಡಿದ್ದು, ಇನ್ನೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ನಿನ್ನೆ ರಾತ್ರಿ ಊಟ ಮುಗಿಸಿ ವಾಕಿಂಗ್ ತೆರಳುತ್ತಿದ್ದ ಮಹಿಳೆಯರ ಮೇಲೆ ಬೆಳಗಾವಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಯುವರಾಜ್ ಜಾಧವ್ ಕಾರು ಹರಿಸಿದ್ದಾರೆ. ಸವಿತಾ ಪಾಟೀಲ್ (44), ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಮಹಿಳೆ ಶಾಂತಾ ಚೌಗುಲೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕರೊನಾ ವೈರಸ್ನಿಂದ ಮಂಗಳೂರಿನಲ್ಲಿ ಮತ್ತೋರ್ವ ಸಾವು…
ಮುತಗಾ ಗ್ರಾಮದ ಬಳಿ ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ಅಡ್ಡಾದಿಡ್ಡಿ ಕಾರು ಚಲಾಯಿಸಿ, ಅಪಘಾತ ಮಾಡಿದ ಯುವರಾಜ್ ಜಾಧವ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿಮಾನ ಹಾರಾಟ ಗೊಂದಲ: ಕೊನೇ ಕ್ಷಣದಲ್ಲಿ ರದ್ದುಗೊಂಡ 32ಕ್ಕೂ ಹೆಚ್ಚು ಫ್ಲೈಟ್ಗಳು