ಉಳ್ಳಾಗಡ್ಡಿ ಖಾನಾಪುರ: ಸಮೀಪದ ಹಿಡಕಲ್ ಡ್ಯಾಂ (ರಾಜಾ ಲಖಮಗೌಡ ಜಲಾಶಯ)ನಿಂದ 10 ಕ್ರಸ್ಟ್ ಗೇಟ್ಗ್ಳ ಮೂಲಕ ಟಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ ಎಂದು ಹುಕ್ಕೇರಿ ತಹಸೀಲ್ದಾರ್ ಡಾ.ಡಿ.ಎಚ್.ಹೂಗಾರ ಮಾಹಿತಿ ನೀಡಿದ್ದಾರೆ, ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ರಾಜಾ ಲಖಮಗೌಡ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.
ಆ ಹಿನ್ನೆಲೆಯಲ್ಲಿ ಟಪ್ರಭಾ ನದಿಗೆ ಸುಮಾರು 20 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ನದಿ ದಡದ ಗ್ರಾಮಗಳ ಜನರು ಮುಂಜಾಗ್ರತೆ ವಹಿಸುವಂತೆ ಹಾಗೂ ಜಾನುವಾರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಕೋರಿದ್ದಾರೆ. ಮಾರ್ಕಂಡೇಯ ಜಲಾಶಯ: ಹುಕ್ಕೇರಿ ತಾಲೂಕಿನ ಮಾರ್ಕಂಡೇಯ ಜಲಾಶಯಕ್ಕೆ 1,400 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಭಾನುವಾರ 1,000 ಕ್ಯೊಸೆಕ್ ನೀರು ಹೊರಬಿಡಲಾಗುತ್ತದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.