ನೆಲಮಂಗಲ: ಮೂರನೇ ಮಹಡಿಯಿಂದ ನೂಕಿ ಪತ್ನಿಯನ್ನು ಕೊಂದಿರುವ ಆರೋಪ ಯುವಕನೊಬ್ಬನ ವಿರುದ್ಧ ಕೇಳಿಬಂದಿದೆ.
ಚೈತ್ರ (20) ಮೃತ ಮಹಿಳೆ. ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿಯಲ್ಲಿ ಘಟನೆ ನಡೆದಿದ್ದು, ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪ ಮಾಡಿದ್ದಾರೆ.
ಇದನ್ನೂ ಓದಿರಿ: ‘ಮೊದಲ ಪತ್ನಿಯ ಜತೆ ಚೆನ್ನಾಗಿಯೇ ಇದ್ದೇನೆ: ಇನ್ನೊಂದು ಮದ್ವೆಯಾಗುವಂತೆ ಮಗಳೇ ಹೇಳಿದ್ದಳು’
ಪತಿ ಕಾಂತರಾಜು (24) ಹಾಗೂ ಮೃತ ಚೈತ್ರ ಕಳೆದ 2 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ತಾವು ಬಾಡಿಗೆ ಮನೆಯಲ್ಲಿ ವಾಸವಿದ್ದ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆಂದ ಆರೋಪಿಸಲಾಗಿದೆ.
ಸದ್ಯ ಆರೋಪಿ ಕಾಂತರಾಜುನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪೂರ್ಣ ತನಿಖೆಯ ಬಳಿಕ ಸತ್ಯಾಸತ್ಯತೆ ಬಯಲಾಗಲಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿರಿ: ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?
1.5 ಕೋಟಿ ರೂ.ಗೆ ವಿವಾಹಿತ ಬಾಯ್ಫ್ರೆಂಡ್ ಖರೀದಿಸಿದ ಮಹಿಳೆ: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?