ನವದೆಹಲಿ: 75ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 21 ಪೊಲೀಸ್ ಅಧಿಕಾರಿಗಳು ಈ ಗೌರವಕ್ಕೆ ಭಾಜನರಾಗಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ.
ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಗಮನಾರ್ಹ ಸೇವೆ ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.
ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್ಪಿ ಅನಿಲ್ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್ಪಿ ರಘು ಕುಮಾರ್, ಎಸಿಪಿ ನಾರಾಯಣಸ್ವಾಮಿ, ಡಿವೈಎಸ್ಪಿ ಶ್ರೀನಿವಾಸ್ ರಾಜ್ ಬೆಟೋಲಿ ಸೇರಿದಂತೆ ರಾಜ್ಯದ 21 ಪೊಲೀಸ್ ಅಧಿಕಾರಿಗಹಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ನಂಬಿಕೆಯೊಂದಿಗೆ ಬಿಜೆಪಿ ಸೇರಿದ್ದೇನೆ: ಜಗದೀಶ್ ಶೆಟ್ಟರ್
ಪೊಲೀಸ್ ಇನ್ಸ್ಪೆಕ್ಟರ್ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್, ವೈರಲೆಸ್ ಎಎಸ್ಐ ಸುರೇಶ್ ರಾಮಪ್ಪ ಪುಂಡಲಿಕಟ್ಟಿ, ಎಎಸ್ಐ ರಾಮ, ಎಸ್ಪಿ ಕಮಾಂಡೆಂಟ್ ಸಿಬ್ಬಂದಿ ನಾಗರಾಜ್ ಅಂಜಪ್ಪ, ಹೆಡ್ ಕಾನ್ಸ್ಟೇಬಲ್ ಸಿ.ವಿ.ಗೋವಿಂದರಾಜು, ಹೆಡ್ ಕಾನ್ಸ್ಟೇಬಲ್ ಮಣಿಕಂಠ ಮಂದರ್ ಬೈಲ್, ಎಎಸ್ಐ ಸಮಂತ್.ಎಸ್, ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಎಸ್.ಎನ್, ಎಸ್ಐ ಪುಂಡಲಿಕ್ ಜೆ.ವಿ.ರಾಮರಾವ್ ನಾಯಕ್ಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ. 2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ, ಗೃಹ ರಕ್ಷಕ ಮತ್ತು ಸಿವಿಲ್ ಡಿಫೆನ್ಸ್ & ಕರೆಕ್ಷನಲ್ ಸೇವೆಯ ಒಟ್ಟು 1132 ಸಿಬ್ಬಂದಿಗೆ ಶೌರ್ಯ ಮತ್ತು ಸೇವಾ ಪದಕಗಳನ್ನು ಘೋಷಣೆ ಮಾಡಲಾಗಿದೆ.