ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ 22 ವರ್ಷದ ಯುವಕನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತನನ್ನು ಸಲ್ಮಾನ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಕರೆ ಮಾಡಿ ಪ್ರಧಾನಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಈಶಾನ್ಯ ದೆಹಲಿಯ ಖಜೋರಿ ಖಾಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆರೋಪಿಯ ವಿಚಾರಣೆಯನ್ನು ನಡೆಸಲಿದ್ದಾರೆ.
ಆರೋಪಿ ಸಲ್ಮಾನ್ ವಿರುದ್ಧ ಈಗಾಗಲೇ ಅನೇಕ ಪೊಲೀಸ್ ಪ್ರಕರಣಗಳಿದ್ದು, ಜಾಮೀನಿನ ಮೇಲೆ ಹೊರಗಿದ್ದಾನೆಂಬುದು ಪೊಲೀಸ್ ವಿಚಾರಣೆ ವೇಳೆ ತಿಳಿದುಬಂದಿದೆ. ಜೈಲಿಗೆ ವಾಪಸ್ಸು ಬರಲು ಬೆದರಿಕೆ ಕರೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.
ಕಳೆದ ಜನವರಿಯಲ್ಲೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿ ಅಮಿತ್ ಷಾ ಮತ್ತು ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದ. ಸಿಎಎ ಮತ್ತು ಎನ್ಆರ್ಸಿ ಅನುಷ್ಠಾನ ಹಿನ್ನೆಲೆಯಲ್ಲಿ ಬೆದರಿಕೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. (ಏಜೆನ್ಸೀಸ್)
ರೋಹಿಣಿ ಸಿಂಧೂರಿ ವರ್ಗಾವಣೆಗೆ ಹೆಚ್ಚಿದ ಒತ್ತಡ! ಸರ್ಕಾರದ ಮುಂದಿನ ನಡೆಯ ಬಗ್ಗೆ ಭಾರೀ ಕುತೂಹಲ
ಸಹಸ್ರಕೋಟಿ ವಂಚಕ ಚೋಕ್ಸಿ ಸಿಗದೇ ಬರಿಗೈಯಲ್ಲಿ ವಾಪಸ್- ಆಕೆ ಗರ್ಲ್ಫ್ರೆಂಡ್ ಅಲ್ಲ, ಪತಿ ಅಂಥವರಲ್ಲ ಎಂದ ಪತ್ನಿ
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು- ಹಾಗಿದ್ದರೆ ಅಂಕ ಹೇಗೆ? ಇಲ್ಲಿದೆ ನೋಡಿ ಮಾಹಿತಿ…