More

    VIDEO| ಮದುವೆಗೆ ಒಪ್ಪಲಿಲ್ಲವೆಂದು ಸಿನಿಮೀಯ ಶೈಲಿಯಲ್ಲಿ ಶಿಕ್ಷಕಿಯ ಅಪಹರಿಸಿದ ದುರುಳರು

    ಹಾಸನ: ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ದುರುಳರು ಸಿನಿಮೀಯ ಶೈಲಿಯಲ್ಲಿ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿರುವ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ.

    ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪಹರಣಕ್ಕೊಳಗಾದ ಶಿಕ್ಷಕಿಯನ್ನು ಅರ್ಪಿತಾ ಎಂದು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

    ಇದನ್ನೂ ಓದಿ: BBKS 10; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನನ್ನು​ ಹೊರಗಿಟ್ಟ ನಮ್ರತಾ

    ಈ ಕುರಿತು ಪ್ರತಿಕ್ರಿಯಿಸಿರುವ ಅರ್ಪಿತಾ ತಾಯಿ, ನಿಮ್ಮ ಮಗಳನ್ನು ನಮ್ಮ ಮಗನಿಗೆ ಮದುವೆ ಮಾಡಿಕೊಡಿ ಎಂದು ಕೆಲ ದಿನಗಳ ಹಿಂದೆ ರಾಮು ಹಾಗೂ ಆತನ ಪೋಷಕರು ನಮ್ಮ ಮನೆಗೆ ಬಂದಿದ್ದರು. ನಾವು ಆಗುವುದಿಲ್ಲ ಎಂದು ಹೇಳಿ ಅವರನ್ನು ವಾಪಸ್​ ಕಳುಹಿಸಿದ್ದೆವು. ನಾವು ಮಗಳನ್ನು ಕೊಡುವುದಿಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದು ಅವರು ಅಪಹರಣ ಮಾಡಿದ್ದಾರೆ ಎಂದು ಶಿಕ್ಷಕಿ ಅರ್ಪಿತಾ ತಾಯಿ ಆರೋಪಿಸಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೊಹಮ್ಮದ್​ ಸುಜೀತಾ ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೊಹಮ್ಮದ್​ ಸುಜೀತಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts