ಪಣಜಿ: ಚಾಮರಾಜನಗರದ ಆಸ್ಪತ್ರೆಯಲ್ಲಿ ಒಂದೇ ರಾತ್ರಿಯಲ್ಲಿ 20ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿರುವ ಘಟನೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಇದೀಗ ಅದೇ ರೀತಿಯ ಘಟನೆಯೊಂದು ಗೋವಾದಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ ನಾಲ್ಕು ಗಂಟೆಗಳಲ್ಲಿ 26 ಸೋಂಕಿತರು ಸಾವನ್ನಪ್ಪಿದ್ದಾರೆ.
ಗೋವಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಈ ರೀತಿಯ ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ 2 ಗಂಟೆಯಿಂದ ಬೆಳಗ್ಗೆ ಆರು ಗಂಟೆಯೊಳಗೆ 26 ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಈ ಸಾವಿಗೆ ಕಾರಣವೇನು ಎನ್ನುವುದರ ಬಗ್ಗೆ ಹೈ ಕೋರ್ಟ್ ತನಿಖೆ ನಡೆಸಬೇಕು ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಒತ್ತಾಯಿಸಿದ್ದಾರೆ.
ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿ ಆದ ಸಮಯಕ್ಕೂ ಮತ್ತು ಪೂರೈಕೆ ಸಮಯಕ್ಕೂ ಹೆಚ್ಚಿನ ವ್ಯತ್ಯಾಸವಾದ್ದರಿಂದಾಗಿ ಈ ಸಾವು ಸಂಭವಿಸಿರಬಹುದೆಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜಿಎಂಸಿಎಚ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಈ ಮಾತನ್ನು ಹೇಳಿದ್ದಾರೆ.
ಸೋಮವಾರದಂದು ಜಿಎಂಸಿಎಚ್ ಆಸ್ಪತ್ರೆ 1200 ಜಂಬೋ ಸಿಲಿಂಡರ್ ಆಕ್ಸಿಜನ್ಗೆ ಬೇಡಿಕೆ ಇಟ್ಟಿತ್ತು. ಅದರಲ್ಲಿ ನಾವು 400 ಸಿಲಿಂಡರ್ ಪೂರೈಕೆ ಮಾಡಿದ್ದೇವೆ. ಸಾವಿಗೆ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಬೇಕು. ಒಂದು ವೇಳೆ ಆಕ್ಸಿಜನ್ ಸಮಸ್ಯೆಯಾಗಿದ್ದರೂ ಅದರ ಬಗ್ಗೆ ನಮಗೆ ಆಸ್ಪತ್ರೆಯಿಂದ ಸೂಕ್ತ ವರದಿ ಬೇಕು ಎಂದು ವಿಶ್ವಜಿತ್ ತಿಳಿಸಿದ್ದಾರೆ. (ಏಜೆನ್ಸೀಸ್)
ಪಶ್ಚಿಮ ಬಂಗಾಳದಲ್ಲಿ ಶೂಟ್ಔಟ್: ಟಿಎಂಸಿ ಮುಖಂಡ ನಿಯೋಗಿ ಬರ್ಬರ ಹತ್ಯೆ
ಕೋವಿಡ್ ನಿಯಮ ಉಲ್ಲಂಘಿಸಿ ವಾಹನ ಬಳಸಿ ಕ್ಯಾರೇ ಅನ್ನದೇ ತಿರುಗಾಟ – ಪಪ್ಪೂ ಅರೆಸ್ಟ್