More

    28, 29ರಂದು ನಾಗದೇವತೆ ಸನ್ನಿಧಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ

    ಕುಶಾಲನಗರ: ಕುಶಾಲನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶ್ರೀನಾಗದೇವತಾ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಪಟ್ಟಣದ ನಾಗದೇವತೆ ಸನ್ನಿಧಾನದಲ್ಲಿ ನ.28 ಮತ್ತು 29ರಂದು ಸುಬ್ರಹ್ಮಣ್ಯ ಷಷ್ಠಿ ಪೂಜೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ.


    ನ.28ರಂದು ಬೆಳಗ್ಗೆ 9 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪಂಚಮಿ ಪೂಜೆ, ಅಭಿಷೇಕ ಮಹಾಮಂಗಳಾರತಿ ನಡೆಸಿ ತೀರ್ಥ ಪ್ರಸಾದ ವಿನಿಯೋಗ ನೆರವೇರುತ್ತದೆ.


    ಸಂಜೆ 8 ಗಂಟೆಗೆ ಆಶ್ಲೇಷ ಬಲಿಪೂಜೆ ನಡೆಸಲಾಗುತ್ತೆ. ಸುಬ್ರಹ್ಮಣ್ಯಕ್ಕೆ ಹೋಗಿ ಆಶ್ಲೇಷ ಬಲಿ ಪೂಜೆ ಮಾಡಿಸಲಾಗದ ಹಲವು ಭಕ್ತರು ಇಲ್ಲಿ ಆ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಮಾಡಿಸುವುದು ಸಂಪ್ರದಾಯವಾಗಿದೆ.
    ನ.29ರಂದು 12 ಗಂಟೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ ಮಾಡಲಾಗುವುದು. ಸಂಜೆ 8 ಗಂಟೆಗೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀನಾಗದೇವತಾ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts