ಬೆಂಗಳೂರು: ನಿನ್ನೆಯಷ್ಟೇ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದ ರಾಜ್ಯ ಸರ್ಕಾರ ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನೂ ಪ್ರಕಟ ಪಡಿಸಿದೆ. ಇದೀಗ ಘೋಷಿಸಿರುವ ವೇಳಾಪಟ್ಟಿ ಪ್ರಕಾರ ಮೇ 24ರಿಂದ ಜೂನ್ 10ರ ವರೆಗೆ ಪರೀಕ್ಷೆ ನಡೆಯಲಿದೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಆಕ್ಷೇಪಣೆಯನ್ನು ಸಲ್ಲಿಸಲಿಕ್ಕೂ ಅವಕಾಶ ನೀಡಲಾಗಿದೆ. ‘ಈ ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ವಿದ್ಯಾರ್ಥಿಗಳು ಅಥವಾ ಅವರ ಪಾಲಕರು ಆಕ್ಷೇಪ ಹೊಂದಿದ್ದರೆ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷೆಗಳ ನಿರ್ದೇಶಕರಿಗೆ ಆಕ್ಷೇಪಣೆ ಸಲ್ಲಿಸಲು ಇನ್ನು ಒಂದು ವಾರದ ಕಾಲಾವಕಾಶ ಇರಲಿದೆ’ ಎಂದು ಸಚಿವರು ತಿಳಿಸಿದ್ದಾರೆ.
ಛೇ..ಛೇ.. ಇಂದೆಂಥ ಅಸಹ್ಯ? ಕಲಾಪದಲ್ಲೇ ಕೂತು ಅಶ್ಲೀಲ ವಿಡಿಯೋ ನೋಡಿದ ಕಾಂಗ್ರೆಸ್ ಎಂಎಲ್ಸಿ
ಕಲಾಪದಲ್ಲಿ ಮೊಬೈಲ್ ನೋಡುತ್ತಿದ್ದ ಕಾಂಗ್ರೆಸ್ ಸದಸ್ಯ! ಡಿಲೀಟ್ ಮಾಡಿದ ಫೋಟೋ-ವಿಡಿಯೋ ಅಶ್ಲೀಲವೇ?
ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಕಲ್ಲು ತೂರಾಟ: ಪೊಲೀಸ್ ಬಂದೋಬಸ್ತ್