ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಸೋಮವಾರ ನಸುಕಿನ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಒಬ್ಬ ಪೊಲೀಸ್ ಮತ್ತು ಇಬ್ಬರು ಕೇಂದ್ರೀಯ ಮೀಸಲು ಪಡೆ ಪೊಲೀಸರು ಹುತಾತ್ಮರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಜಮ್ಮು-ಕಾಶ್ಮೀರ ಪೊಲೀಸ್ ವಿಶೇಷ ಪೊಲೀಸ್ ಅಧಿಕಾರಿ(ಎಸ್ಪಿಒ) ಮತ್ತು ಇಬ್ಬರು ಸಿಆರ್ಪಿಎಫ್ ಯೋಧರು ಉಗ್ರರ ಗುಂಡಿನ ದಾಳಿಗೆ ಎದೆಯೊಡ್ಡಬೇಕಾಗಿ ಬಂದು ಹುತಾತ್ಮರಾದರು. ಈ ಘಟನೆ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದಿತ್ತು.
ದಾಳಿ ನಡೆಸಿದ ಕೂಡಲೇ ಉಗ್ರರು ಆ ಸ್ಥಳದಿಂದ ಪರಾರಿಯಾಗಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿದ್ದ ರಕ್ಷಣಾ ಪಡೆಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಇದರ ಬೆನ್ನಿಗೆ, ರಕ್ಷಣಾ ಪಡೆಗಳು ಆ ಪ್ರದೇಶ ಪೂರ್ತಿ ಆವರಿಸಿಕೊಂಡು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. (ಏಜೆನ್ಸೀಸ್)