ಅಮರಾವತಿ: ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಿಗಳನ್ನು ಗ್ರಾಮಸ್ಥರೇ ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಗೋದಾವರಿ ಜಿಲ್ಲೆಯ ರಾಯವರಂ ಮಂಡಲದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಮಹಿಳೆಯೊಬ್ಬಳು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ನಾಲ್ವರು ಬೈಕ್ನಲ್ಲಿ ಬಂದು ಮಹಿಳೆಯನ್ನು ಅಡ್ಡಗಟ್ಟಿದ್ದಾರೆ. ನಂತರ ಆಕೆಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಊರಿಗೆ ಓಡಿಬಂದಿದ್ದಾಳೆ.
ವಿಷಯ ತಿಳಿದ ಗ್ರಾಮಸ್ಥರು ಕಾಮುಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಹಿಡಿದಿದ್ದಾರೆ. ಓರ್ವ ಆರೋಪಿ ಎಸ್ಕೇಪ್ ಆಗಿದ್ದಾನೆ. ಸಿಕ್ಕಿಬಿದ್ದ ಮೂವರನ್ನು ಮರವೊಂದಕ್ಕೆ ಕಟ್ಟಿ ಥಳಿಸಿದ್ದಾರೆ. (ಏಜೆನ್ಸೀಸ್)
ಡೆತ್ ಸರ್ಟಿಫಿಕೇಟ್, ಆ್ಯಂಬುಲೆನ್ಸ್ಗೆ ಹಣ ಕೇಳುವವರ ವಿರುದ್ಧ ಕಠಿಣ ಕ್ರಮ
17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…