ಭೋಪಾಲ್: ಬೇಟೆಗಾರರನ್ನು ಹಿಡಿಯಲು ಹೋದ ಮೂವರು ಪೊಲೀಸರು ಬೇಟೆಗಾರರ ಗುಂಡೇಟಿಗೆ ಬಲಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೇಟೆಗಾರರು ಕೃಷ್ಣಮೃಗ ಬೇಟೆಯಾಡಲು ಗ್ರಾಮದ ಸಮೀಪದ ಅರಣ್ಯದಲ್ಲಿ ಹೋಗಿರುವ ಮಾಹಿತಿ ಪಡೆದ ಪೊಲೀಸರು, ಕೂಡಲೇ ಸ್ಥಳಕ್ಕೆ ತಲುಪಿದ್ದಾರೆ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಶನಿವಾರ ಮುಂಜಾನೆ 3 ಗಂಟೆಗೆ ಅರಣ್ಯ ಪ್ರದೇಶಕ್ಕೆ ತಲುಪಿದ ಪೊಲೀಸರ ತಂಡ ಬೇಟೆಗಾರರನ್ನು ಸುತ್ತುವರಿದಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಬೇಟೆಗಾಗಿ ತಂದಿದ್ದ ಬಂದೂಕಿನಿಂದಲೇ ಪೊಲೀಸರ ಮೇಲೆ ಹಾರಿಸಿದ್ದಾರೆ. ಕೂಡಲೇ ಎಸ್ಐ ಸೇರಿ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.
ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. (ಏಜೆನ್ಸೀಸ್)
ಕಚೇರಿಗೆ ಬಂದು ಕೆಲಸ ಮಾಡಿ ಅಂದಿದ್ದಕ್ಕೆ 800 ಉದ್ಯೋಗಿಗಳಿಂದ ರಾಜೀನಾಮೆ!