More

    30ರಂದು ಕೆಸರು ಗದ್ದೆ ಕ್ರೀಡಾಕೂಟ

    ಸೋಮವಾರಪೇಟೆ: ಶನಿವಾರಸಂತೆ ಸಮೀಪದ ಮೂದ್ರವಳ್ಳಿ ಗ್ರಾಮದಲ್ಲಿ ತಾಲೂಕು ಒಕ್ಕಲಿಗರ ಯುವ ವೇದಿಕೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ 8ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಜು.30ರಂದು ಆಯೋಜಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು.


    ಮ ನಿವಾಸಿ ರಾಕೇಶ್ ಅವರ ಕೆಸರು ಗದ್ದೆಯಲ್ಲಿ ಬೆಳಗ್ಗೆ 9 ಗಂಟೆಗೆ ಸ್ಪರ್ಧೆ ಆರಂಭಗೊಳ್ಳಲಿವೆ. ಶನಿವಾರಸಂತೆ, ಕೊಡ್ಲಿಪೇಟೆಯ ಮುಖ್ಯರಸ್ತೆಯ ಗ್ರಾಮದ ಸಮುದಾಯ ಭವನದ ಹಿಂಭಾಗದ ಗದ್ದೆಯಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
    ಪುರುಷರಿಗೆ ಹಗ್ಗಜಗ್ಗಾಟ(9 ಜನ), ವಾಲಿಬಾಲ್(6 ಜನ), ಗದ್ದೆ ಓಟ, ಮಹಿಳೆಯರಿಗೆ ಥ್ರೋಬಾಲ್(9 ಜನ), ಹಗ್ಗಜಗ್ಗಾಟ, ಗದ್ದೆ ಓಟ, 40 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಓಟ, ಗಂಡ ಹೆಂಡತಿ ಓಟ ಹಾಗೂ ಮಕ್ಕಳಿಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
    ಸ್ಪರ್ಧೆ ಒಕ್ಕಲಿಗ ಸಮುದಾಯದವರಿಗೆ ಸೀಮಿತವಾಗಿದ್ದು, ಅದ್ದೂರಿಯಾಗಿ ನಡೆಯಲಿದೆ. ಪ್ರತಿ ಸ್ಪರ್ಧೆಗೂ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಮಾಹಿತಿಗೆ ಮೊ.9482091597, 8971837140 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು. ವೇದಿಕೆ ಉಪಾಧ್ಯಕ್ಷ ಎಚ್.ಕೆ.ಪೃಥ್ವಿ, ಕಾರ್ಯದರ್ಶಿ ಚೌಡ್ಲು ಯೋಗೇಂದ್ರ, ಪದಾಧಿಕಾರಿಗಳಾದ ಎಸ್.ಪಿ.ಶ್ರೀಹರಿ, ಕೆ.ಎ.ಪ್ರಕಾಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts