ಚೆನ್ನೈ: ಮದ್ರಾಸ್ ಐಐಟಿಯಲ್ಲಿ ಕರೊನಾ ರಣಕೇಕೆ ಮುಂದುವರಿದಿದೆ. ಮಂಗಳವಾರವೂ 32 ಹೊಸ ಪ್ರಕರಣಗಳು ದಾಖಲಾಗಿದ್ದು, ಈವರೆಗೆ 111ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ತಮಿಳುನಾಡು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಡಾ.ಜೆ.ರಾಧಾಕೃಷ್ಣನ್ ಐಐಟಿಯನ್ನು ಕರೊನಾ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕೊವಿಡ್ ಮಾರ್ಗಸೂಚಿ ಕುರಿತು ವಿದ್ಯಾರ್ಥಿಗಳೊಂದಿಗೆ ಚೆನ್ನೈ ಆರೋಗ್ಯಾಧಿಕಾರಿ ಡಾ.ಆಲ್ಬೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳು ಐಐಟಿ ಆವರಣದಲ್ಲಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಡಾ.ಜೆ ರಾಧಾಕೃಷ್ಣನ್ ಮನವಿ ಮಾಡಿದ್ದಾರೆ.
ಈ ನಡುವೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.