ನವದೆಹಲಿ: ಜೆಎನ್ಯು ಹಿಂಸಾಚಾರ ಪ್ರಕರಣದಲ್ಲಿ ಗಾಯಗೊಂಡ 36 ಜನರಿಗೆ ಚಿಕಿತ್ಸೆ ನೀಡಿ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೂವತ್ತಾರು ಜನರ ಪೈಕಿ ನಾಲ್ವರು ಜೆಎನ್ಯುನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು. ಅವರಿಗೆ ಸಣ್ಣ ಪ್ರಮಾಣದ ಗಾಯ ತಲೆಗೆ ಆಗಿದ್ದವು. ಇನ್ನುಳಿದವರಿಗೆ ಮೂಳೆ ಮುರಿತ, ಸ್ನಾಯು ಹರಿದುಹೋಗಿರುವಂಥದ್ದು ಆಗಿತ್ತು. ಎಲ್ಲರಿಗೂ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ.
ಎಲ್ಲರನ್ನೂ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು. ಸೋಮವಾರ ನಸುಕಿನ 2 ಗಂಟೆಗೆ ಬಿಡುಗಡೆ ಮಾಡಲಾಗಿದೆ. ಗಾಯಗೊಂಡವರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. (ಏಜೆನ್ಸೀಸ್)