More

    ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 3634 ವಿದ್ಯಾರ್ಥಿಗಳು ನೋಂದಣಿ


    ಮಂಡ್ಯ ಪ್ರಸಕ್ತ ಸಾಲಿನಲ್ಲಿ ಮಾ.25ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 3634 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ ಎಂದು ಮದ್ದೂರು
    ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಿಳಿಸಿದರು.


    ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳ ಪೈಕಿ 1944 ಬಾಲಕರು, 1690 ಬಾಲಕಿಯರು ಇದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಟ್ಟಣದ ಬಿಇಒ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶನಿವಾರ ಹೇಳಿದರು.


    ಈ ಬಾರಿಯ ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅವಳಡಿಸಿರುವ ಸಿ.ಸಿ.ಕ್ಯಾಮರಾಗಳ ಮೂಲಕ ಪರೀಕ್ಷಾ ಚಟುವಟಿಕೆಗಳನ್ನು ವೀಕ್ಷಣೆ ಮಾಡಲು ಸಾಧ್ಯವಾಗುವಂತೆ ಪರೀಕ್ಷಾ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೆಳ್ಳಲಾಗಿದೆ. ಪರೀಕ್ಷೆ ಸಮಯದಲ್ಲಿ ಸಣ್ಣ ಪ್ರಮಾಣದ ತಪ್ಪು ನಡೆದರೂ ಸಂಬಂಧಿಸಿದವರು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಪರೀಕ್ಷೆಯಲ್ಲಿ ಭಾಗವಹಿಸುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಬಾರಿ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿ ಊಟದ ವ್ಯವಸ್ಥೆ ಆಯೋಜನೆ ಮಾಡಲಾಗಿದೆ ಎಂದರು.


    ತಾಲೂಕಿನಲ್ಲಿ 39 ಸರ್ಕಾರಿ, ಅನುದಾನಿತ 18, ವಸತಿ 25 ಶಾಲೆಗಳಿವೆ. ಒಟ್ಟು 88 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದು, 12 ಪರೀಕ್ಷಾ ಕೇಂದ್ರಗಳಿವೆ. 12 ಮುಖ್ಯ ಅಧೀಕ್ಷಕರು, 12 ಉಪ ಅಧೀಕ್ಷರು, 12 ಕಸ್ಟೋಡಿಯನ್, 12 ಸ್ಥಾನಿಕ ಜಾಗೃತ ದಳ, 12 ಜನರು ಮೊಬೈಲ್ ಸ್ವಾಧಿನಾಧಿಕಾರಿಗಳು, 242 ಕೊಠಡಿ ಮೇಲ್ವಿಚಾರಕರು ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿವರಿಸಿದರು.


    ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮದ್ದೂರು, ಭಾರತಿ ಪ್ರೌಢಶಾಲೆ ಭಾರತೀನಗರ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಸಗರಹಳ್ಳಿ, ಜವಹರ್ ಪ್ರೌಢಶಾಲೆ ಮದ್ದೂರು, ಗಾಂಧಿ ಸಂಯುಕ್ತ ಪದವಿ ಪೂರ್ವ ಕಾಲೇಜು ಬೆಕ್ಕಳಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಕೆಸ್ತೂರು, ಸರ್ಕಾರಿ ಪದವಿ ಪೂರ್ವ ಕಾಲೇಜು ಚಂದೂಪುರ, ಚಾಮ್ ಶುಗರ್ ಪ್ರೌಢಶಾಲೆ ಭಾರತೀನಗರ, ಸರ್ಕಾರಿ ಪದವಿ ಪೂರ್ವ ಕಾಲೇಜು ಕೆ.ಹೊನ್ನಲಗೆರೆ, ಪೂರ್ಣಪ್ರಜ್ಞಾ ಪ್ರೌಢಾಶಾಲೆ ಶಿವಪುರ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಪ್ಪ ಹಾಗೂ ಸರ್ಕಾರಿ ಪ್ರೌಢಶಾಲೆ ಭಾರತಿನಗರ ಇವುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

    ತಾಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಕೆ.ಆರ್.ಲೋಕೇಶ್, ಶಿಕ್ಷಣ ಸಂಯೋಜಕರಾದ ಎಂ.ಪಿ.ಮಹೇಶ್, ಎಂ.ಪಿ.ನಟೇಶ್, ಕ್ಷೇತ್ರ ಸಮನ್ವಯಾಧಿಕಾರಿ ಹನುಮಶೆಟ್ಟಿ ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts