ಶ್ರೀನಗರ: ಇಂದು ಜಮ್ಮುಕಾಶ್ಮೀರದಲ್ಲಿ ಬಿಜೆಪಿ ಮುಖಂಡನೋರ್ವನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ, ಬಿಜೆಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಬುಡ್ಗಾಮ್ ಜಿಲ್ಲೆಯ ಒಬಿಸಿ ಮೋರ್ಚಾ ಅಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದೀಗ ಬುಡ್ಗಾಮ್ ಜಿಲ್ಲೆಯ ಬಿಜೆಪಿ ಎಂಎಂ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇರಿ ಒಟ್ಟು ನಾಲ್ವರು ರಾಜೀನಾಮೆ ನೀಡಿದ್ದಾರೆ.
ಇಂದು ಮುಂಜಾನೆ ಉಗ್ರರು ಅಬ್ದುಲ್ ಮೇಲೆ ಗುಂಡು ಹಾರಿಸಿದ್ದಾರೆ. ಕಾಶ್ಮೀರದಲ್ಲಿ ಬಿಜೆಪಿ ನಾಯಕರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಇದು ಪಾಕಿಸ್ತಾನ ಹತಾಶೆಯಿಂದ ಮಾಡುತ್ತಿರುವ ಕೆಲಸ ಎಂದು ಜಮ್ಮುಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ತಿಳಿಸಿದ್ದಾರೆ. ಇದನ್ನೂ ಓದಿ: PHOTO GALLERY: ಕಿಚ್ಚ ಸುದೀಪ್ ದತ್ತು ಪಡೆದ ಶಾಲೆಗಳ ನೈಜ ಸ್ಥಿತಿ ಇಲ್ಲಿದೆ ನೋಡಿ..
ಜಮ್ಮುಕಾಶ್ಮೀರದಲ್ಲಿ ಬಿಜೆಪಿ ನಾಯಕರ ಸಂಖ್ಯೆ ಹೆಚ್ಚುತ್ತಿರುವುದನ್ನು ಪಾಕಿಸ್ತಾನಕ್ಕೆ ಸಹಿಸಲಾಗುತ್ತಿಲ್ಲ. ಹಾಗಾಗಿ ಉಗ್ರರನ್ನು ಛೂ ಬಿಡುವ ಮೂಲಕ, ಹೇಡಿತನದ ನಡೆ ತೋರುತ್ತಿದೆ ಎಂದು ಹೇಳಿದ್ದಾರೆ.
ಜುಲೈನಲ್ಲಿ ಬಂಡಿಪೋರಾ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ ಅವರನ್ನು ಉಗ್ರರು ಕೊಂದಿದ್ದಾರೆ. ಅವರ ಸೋದರ, ತಂದೆಯೂ ಕೂಡ ಸಾವನ್ನಪ್ಪಿದ್ದಾರೆ. ಇವೆಲ್ಲ ಬೆಳವಣಿಗೆಗಳ ಬಳಿಕ ಈಗ ನಾಲ್ಕು ಮುಖಂಡರು ರಾಜೀನಾಮೆ ನೀಡಿದ್ದಾರೆ. (ಏಜೆನ್ಸೀಸ್)
ಕಡತಗಳಿಗೆ ಸಹಿ ಹಾಕಲೆಂದೆ ಐಎಎಸ್ ಅಧಿಕಾರಿಯಾದೆ; ಅಪ್ಪನ ಕನಸು ನನಸಾದ ಸಾರ್ಥಕತೆ