ಭಾರತದಲ್ಲಿ ಇಂದಿನಿಂದ ನಾಲ್ಕು ದಿನ ‘ಲಸಿಕೆ ಉತ್ಸವ’

blank

ನವದೆಹಲಿ : ಉಲ್ಬಣವಾಗುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಯ ಮೇರೆಗೆ, ಇಂದಿನಿಂದ ಭಾರತದಾದ್ಯಂತ ನಾಲ್ಕು ದಿನಗಳ “ಟೀಕಾ ಉತ್ಸವ್” ಅರ್ಥಾತ್ ‘ಲಸಿಕೆ ಉತ್ಸವ’ ಆರಂಭವಾಗುತ್ತಿದೆ. ಈ ಸಮಯದಲ್ಲಿ ಸಾಮೂಹಿಕ ಲಸಿಕಾ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಸಂಖ್ಯೆಯಲ್ಲಿ ಅರ್ಹ ವಯೋಮಾನದ ಜನರಿಗೆ ಕರೊನಾ ಲಸಿಕೆ ನೀಡುವ ಉದ್ದೇಶವಿದೆ.

“ಏಪ್ರಿಲ್ 11 ರಿಂದ 14 ಅನ್ನು ಟೀಕಾ ಉತ್ಸವವಾಗಿ ನಾವು ಆಚರಿಸಬಹುದೇ ? ಈ ಸಮಯದಲ್ಲಿ ಒಂದೂ ಲಸಿಕೆಯನ್ನು ವ್ಯರ್ಥ ಮಾಡದೆ ಎಷ್ಟು ಸಾಧ್ಯವೋ ಅಷ್ಟೂ ಅರ್ಹ ಜನರಿಗೆ ಲಸಿಕೆ ನೀಡಬೇಕು” ಎಂದು ಇತ್ತೀಚೆಗೆ ನಡೆದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಮೋದಿ ಪ್ರಸ್ತಾವನೆ ಇಟ್ಟಿದ್ದರು.

ಇದನ್ನೂ ಓದಿ: ಮತದಾನ ನಡೆದ ಕೆಲವೇ ದಿನಗಳಲ್ಲಿ ತಮಿಳುನಾಡಿನ ಕಾಂಗ್ರೆಸ್​ ಅಭ್ಯರ್ಥಿ ಕರೊನಾಗೆ ಬಲಿ..!

ಕರ್ನಾಟಕದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಲಸಿಕೆಯು ಕರೊನಾ ವೈರಸ್ ವಿರುದ್ಧ ಹೋರಾಡಲು ಅತಿದೊಡ್ಡ ಶಸ್ತ್ರವಾಗಿದೆ ಎಂದಿದ್ದು, ಅರ್ಹ ವಯೋಮಾನದ ಜನರೆಲ್ಲಾ ಲಸಿಕೆ ಪಡೆಯಬೇಕೆಂದು ಕರೆ ನೀಡಿದ್ದಾರೆ.

ಉತ್ತರಪ್ರದೇಶ, ಬಿಹಾರ ಸೇರಿದಂತೆ ಹಲವು ರಾಜ್ಯಗಳು ಈ ಸಮಯದಲ್ಲಿ ದುಪ್ಪಟ್ಟು ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧತೆ ನಡೆಸಿವೆ. ಉ.ಪ್ರ.ದಲ್ಲಿ 6,000 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲರು ಲಸಿಕಾಕರಣದ ಬಗ್ಗೆ ವೆಬಿನಾರ್​ಗಳನ್ನು ನಡೆಸಲಿದ್ದಾರೆ. ‘ಟೀಕಾ ಉತ್ಸವ್’​ ಸಮಯದಲ್ಲಿ ಬಿಹಾರದಲ್ಲಿ ನಾಲ್ಕು ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಇದಕ್ಕಾಗಿ ಜನರು ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು ಎಂದು ಸಿಎಂ ನಿತೀಶ್ ಕುಮಾರ್ ಕರೆ ನೀಡಿದ್ದಾರೆ.

ಇದನ್ನೂ ಓದಿ: ರೇವ್ ಪಾರ್ಟಿ ಮೇಲೆ ದಾಳಿ: ನೂರಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು!

ಈ ಮಧ್ಯೆ, ಪಂಜಾಬ್, ರಾಜಾಸ್ತಾನ್, ಮಹಾರಾಷ್ಟ್ರ, ಝಾರ್ಖಂಡ್, ದೆಹಲಿ ಸಿಎಂಗಳು ತಮ್ಮ ಲಸಿಕೆಯ ಸ್ಟಾಕ್ ಖಾಲಿಯಾಗುತ್ತಿದೆ ಎಂದು ಎಚ್ಚರಿಸಿವೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಲಸಿಕೆಯನ್ನು ಸಮರ್ಪಕವಾಗಿ ಬಳಸಬೇಕು ಎಂದು ತಾಕೀತು ಮಾಡಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾದುನೋಡಬೇಕಾಗಿದೆ. (ಏಜೆನ್ಸೀಸ್)

“ಕರೊನಾ ಲಸಿಕೆ ರಫ್ತು ಕೂಡಲೇ ನಿಲ್ಲಿಸಿ” : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ

ಕರೊನಾ : ಸಕ್ರಿಯ ಪ್ರಕರಣಗಳಲ್ಲಿ ಇವು ಟಾಪ್​ ಟೆನ್ ಜಿಲ್ಲೆಗಳು

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…