ಗದಗ: ಚುನಾವಣೆ ಘೋಷಣೆ ಮುನ್ನವೇ ಗದಗ ಜಿಲ್ಲಾಡಳಿತ ಭರ್ಜರಿ ಚಿನ್ನದ ಬೇಟೆಯನ್ನು ಮಾಡಿದೆ. ಗದಗ ನಗರದ ಹೊರವಲಯದ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಭಾರಿ ಪ್ರಮಾಣದ ಚಿನ್ನದ ಜತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
4 ಕಿಲೋ ಬಂಗಾರದ ಆಭರಣ ಜಪ್ತಿ ಮಾಡಲಾಗಿದೆ. ಮಹಿಪಾಲ್ ಜೈನ್, ಅಭಿಷೇಕ್ ಜೈನ್ ಎಂಬುವರ ಸೇರಿದ ಚಿನ್ನವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಪತ್ನಿಯನ್ನು ತವರು ಮನೆಗೆ ಕಳಿಸಿ..ಮಗಳ ಕತ್ತು ಹಿಸುಕಿ ಜೀವತೆಗೆದ ತಂದೆ
ಚುನಾವಣೆ ಘೋಷಣೆ ಮುನ್ನವೇ ಗದಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ನಗರದ ಹೊರವಲಯದ ಚೆಕ್ ಪೋಸ್ಟ್ನಲ್ಲಿ ಬಾಂಬೆಯಿಂದ ಗದಗಕ್ಕೆ ತರುತ್ತಿದ್ದ ದಾಖಲೆ ಇಲ್ಲದ 4 ಕಿಲೋ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ: ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ..!
ಡಿಸಿ ವೈಶ್ಯಾಲಿ, ಎಸ್ಪಿ ಬಿ ಎಸ್ ನೇಮಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಭಾರಿ ಪ್ರಮಾಣದ ಚಿನ್ನದ ಜತೆಗೆ ಆರೋಪಿಗಳನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ .