More

    ದಾಖಲೆ ಇಲ್ಲದ 4 ಲಕ್ಷ ರೂ. ವಶ

    ಕುಶಾಲನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು-ಮೈಸೂರು ಗಡಿಭಾಗದ ತಪಾಸಣಾ ಕೇಂದ್ರದಲ್ಲಿ ಶುಕ್ರವಾರ ಕೊಪ್ಪದಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ವಾಹನದಲ್ಲಿ ದಾಖಲೆ ಇಲ್ಲದ ನಗದು ಪತ್ತೆಯಾಗಿದೆ. ದಾವಾ ನೋರ್ಬು ಎಂಬುವರ ಬಳಿಯಿದ್ದ 4 ಲಕ್ಷ ರೂ. ಅನ್ನು ಕುಶಾಲನಗರ ತಪಾಸಣಾ ಕೇಂದ್ರದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಣವನ್ನು ಕುಶಾಲನಗರದ ಖಜಾನೆಯಲ್ಲಿ ಜಮಾ ಮಾಡಲಾಗಿದ್ದು, ಸೂಕ್ತ ದಾಖಲೆ ಒದಗಿಸಿದರೆ ವಾಪಸ್ ನೀಡಲಾಗುವುದು ಎಂದು ಚುನಾವಣಾಧಿಕಾರಿ ಪೂವಯ್ಯ ತಿಳಿಸಿದ್ದಾರೆ ಪೊಲೀಸ್ ಸಿಬ್ಬಂದಿ ಉಮಾ, ಅರುಣ್, ಶಶಿಕುಮಾರ್, ಜಯಪ್ರಕಾಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts