More

    ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು! ಡೆತ್​ನೋಟ್​ನಿಂದ ಬಯಲಾಯ್ತು ಕಾರಣ

    ಅಮರಾವತಿ: ಒಂದೇ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಈ ಆತ್ಮಹತ್ಯೆಗೆ ಕಾರಣ ಡೆತ್​ನೋಟ್​ನಿಂದ ಬಯಲಾಗಿದೆ.

    ಪ್ರತಾಪ್(42) ಆತನ ಹೆಂಡತಿ ಹೇಮಲತಾ(36), ಮಗ ಜಯಂತ್(17) ಮತ್ತು ಮಗಳು ರಿಶಿತಾ(14) ಆತ್ಮಹತ್ಯೆಗೆ ಶರಣಾದವರು. ಇವರೆಲ್ಲರೂ ವಿಷ ಕುಡಿದ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಇತ್ತೀಚೆಗೆ ಕರೊನಾದಿಂದಾಗಿ ಅವರ ಸಂಬಂಧಿಗಳು ಹಾಗೂ ಸ್ನೇಹಿತರು ಸತ್ತಿದ್ದನ್ನು ನೋಡಿ ಬೇಸತ್ತಿದ್ದ ಕುಟುಂಬ ಅದೇ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್​ನಲ್ಲಿ ಬರೆದಿದ್ದಾಗಿ ಹೇಳಲಾಗಿದೆ.

    ಪ್ರತಾಪ್​ ಟಿವಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಮೃತರು ಮನೆಯೊಳಗೇ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರ ಮಾಹಿತ ಆಧಾರದ ಮೇಲೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಏಜೆನ್ಸೀಸ್)

    ಬಿಗ್​ಬಾಸ್​ ಮನೆ ಒಳಗೆ ಬರ್ತಿದ್ದಂತೆ ಫೈಟ್ ಶುರು ಮಾಡಿದ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್!

    ಮಗ ಎಂದುಕೊಂಡಿದ್ದವ ನನ್ನ ಚಿಕ್ಕಪ್ಪನಾದ! ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಆಡುತ್ತಿದ್ದ ಆಟವನ್ನು ಬಿಚ್ಚಿಟ್ಟ ಯುವಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts