More

    ಕೋಲಾರದಲ್ಲಿ ಬಲವಂತವಾಗಿ ಮತಾಂತರಿಸಲು ಯತ್ನ; ನಾಲ್ವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..

    ಕೋಲಾರ: ಮತಾಂತರ ನಿಷೇಧ ಕಾಯ್ದೆ ಕುರಿತ ಚರ್ಚೆ ವ್ಯಾಪಕವಾಗಿ ನಡೆಯುತ್ತಿರುವ ನಡುವೆಯೇ ಬಲವಂತದ ಮತಾಂತರ ಯತ್ನ ಪ್ರಕರಣವೊಂದು ಕೋಲಾರದಲ್ಲಿ ಕಂಡುಬಂದಿದೆ. ಮತಾಂತರ ಮಾಡಿಸಲು ಯತ್ನಿಸುತ್ತಿದ್ದ ನಾಲ್ವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಮೋತಿಲಾಲ್ ರಸ್ತೆಯಲ್ಲಿ ನಾಲ್ವರು ಕ್ರಿಶ್ಚಿಯನ್​ ಧರ್ಮಪ್ರಚಾರಕರು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿರುವುದು ಕಂಡು ಬಂದಿತ್ತು.

    ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆಸ್ಪತ್ರೆಗೆ ಸೇರಿದ; ಬೈಕ್​ನಿಂದ ಬಿದ್ದ ಯುವಕನ ಬ್ರೇನ್​ಡೆತ್​; ಪೊಲೀಸರ ವಿರುದ್ಧ ಪಾಲಕರ ಆರೋಪ

    ಇಲ್ಲಿನ ಬೇಬಮ್ಮ ಎನ್ನುವವರ ಮನೆಯಲ್ಲಿ ಈ ಮತಾಂತರ ಯತ್ನ ನಡೆಯುತ್ತಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು ಮತಾಂತರಕ್ಕೆ ಬಳಸಿದ್ದ ಪುಸ್ತಕ ಹಾಗೂ ಭಿತ್ತಿಪತ್ರಗಳನ್ನ ರಸ್ತೆಗೆ ಹಾಕಿ ಬೆಂಕಿ ಹಚ್ಚಿದ್ದಾರೆ.

    ಇದನ್ನೂ ಓದಿ: ಎಚ್ಚರ.. ಎಚ್ಚರ.. ಹೊರಗೆಲ್ಲೂ ಹೋಗದವರಿಗೂ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೂ ಬಂದಿದೆ ಒಮಿಕ್ರಾನ್​!

    ಮಾಹಿತಿ ತಿಳಿದ ಶ್ರೀನಿವಾಸಪುರ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಳಿಕ ನಾಲ್ವರು ಕ್ರಿಶ್ಚಿಯನ್ ಗುರುಗಳು ಹಾಗೂ ಅವರು ಬಂದಿದ್ದ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ. ಈ ಧರ್ಮಪ್ರಚಾರಕರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಿಂದ ಬಂದಿರುವ ಧರ್ಮ ಪ್ರಚಾರಕರು.

    ಮತಾಂತರವಾಗಿದ್ದವರ ಘರ್​ ವಾಪಸಿ; ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಶಿಲುಬೆ ತೆಗೆದಿಟ್ಟು ಕಂಕಣ ಕಟ್ಟಿಕೊಂಡು ವಾಪಸ್

    ದೊಣ್ಣೆಯಿಂದ ಹೊಡೆದು ಮಗನನ್ನೇ ಕೊಂದ ತಂದೆ!; ಬಳಿಕ ಶವ ಮನೆಯಲ್ಲಿಟ್ಟು ಜಮೀನಿಗೆ ತೆರಳಿ ಕೃಷಿಯಲ್ಲಿ ತೊಡಗಿದ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts