blank

ನಿಂತಿದ್ದ ಬಸ್​ಗೆ TT ಡಿಕ್ಕಿ; ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ

Bus TT Accident

ಲಖನೌ: ನಿಂತಿದ್ದ ಬಸ್​ಗೆ ಟೆಂಪೋ ಟ್ರಾವೆಲರ್ (TT) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದೆ.

ರಸ್ತೆಬದಿ ಕೆಟ್ಟು ನಿಂತಿದ್ದ ಬಸ್​ಗೆ ಟೆಂಪೋ ಟ್ರಾವೆಲರ್​ (TT) ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದು, ಪೊಲೀಸು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದಿಲೀಪ್​ ಕುಮಾರ್ ಸಿಂಗ್​, ಛತ್ತೀಸ್​ಗಢದಿಂದ ಅಯೋಧ್ಯೆಗೆ ತೆರಳುತ್ತಿದ್ದ ಬಸ್ಸೊಂದು ಕೆಟ್ಟಿ ರಸ್ತೆಬದಿ ನಿಂತಿತ್ತು. ವೇಗವಾಗಿ ಬಂದ ಟೆಂಪೋ ಟ್ರಾವೆಲರ್ (TT) ನಿಂತಿದ್ದ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದಿಲೀಪ್​ ಕುಮಾರ್ ಸಿಂಗ್ ತಿಳಿಸಿದ್ದಾರೆ.

ದೇವೇಗೌಡರು ಬಿಜೆಪಿ, ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ: CM Siddaramaiah

ಭಾರತವನ್ನು ಸೋಲಿಸುವುದಕ್ಕಿಂತ ನಮಗೆ… Champions Trophy ವಿಚಾರವಾಗಿ ಪಾಕ್ ಉಪನಾಯಕನ ಹೇಳಿಕೆ ವೈರಲ್​​

Share This Article

ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams

dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…

ಪ್ರತಿದಿನ ಊಟಕ್ಕೆ ಗರಿಗರಿ ಹಪ್ಪಳ ಬೇಕಾ? ಹಾಗಿದ್ರೆ ಆರೋಗ್ಯ ಬಗ್ಗೆ ಇರಲಿ ಎಚ್ಚರ..papad

papad: ಹಪ್ಪಳಗಳನ್ನು ಊಟದಲ್ಲಿ ರುಚಿ ಇರಲಿ ಎಂಬ ಕಾರಣಕ್ಕೆ ಬಳಸುತ್ತಾರೆ. ಹಾಗಾಗಿ ಊಟಕ್ಕೆ ರುಚಿ ಇದೆ…

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…