More

    ಹಾಸ್ಟೆಲ್​ ಉಪಾಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ರಾಯಚೂರು: ಕಳಪೆ ಗುಣಮಟ್ಟದ ಆಹಾರ ಸೇವಿಸಿದ ಪರಿಣಾಮ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

    ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು, ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ವಸತಿ ನಿಲಯದ ಸಿಬ್ಬಂದಿಯೊಬ್ಬರು, ಬೆಳಗಿನ ತಿಂಡಿಗೆ ಇಡ್ಲಿ-ಚಟ್ನಿ ನೀಡಲಾಗಿತ್ತು. ಮಧ್ಯಾಹ್ನದ ಊಟಕ್ಕೆ ಅನ್ನ-ಸಾಂಬಾರ್​ ಕೊಡಲಾಗಿತ್ತು. ರಾತ್ರಿ 08 ಗಂಟೆ ಸುಮಾರಿಗೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮಕ್ಕಳ ಹಾಗೂ ಆಹಾರದ ಮಾದರಿಗಳನ್ನು ಸಂಗ್ರಹಿಸಿದ್ದು, ಲ್ಯಾಬ್​ ರಿಪೋರ್ಟ್​ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ನಿಲಯದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

    Students Ill Health

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts