ಮಹಿಳೆ-ಮಕ್ಕಳ ಅಭಿವೃದ್ಧಿಗೆ 43,118 ಕೋಟಿ ರೂ. ಮೀಸಲು

ಬೆಂಗಳೂರು: ಸ್ವಾವಲಂಬಿಗಳಾಗುವ ಮೂಲಕ ರಾಜ್ಯದಲ್ಲಿ ಆರ್ಥಿಕ ಕ್ರಾಂತಿಗೆ ಮಹಿಳೆಯರು ಮುನ್ನುಡಿ ಬರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ತಾಯಿಗೆ ವಿಶೇಷವಾದ ಸ್ಥಾನಮಾನವಿದೆ. ಮಹಿಳೆ ಶಕ್ತಿಯ ಪ್ರತೀಕ. ಆಕೆಯಿಂದಲೇ ಈ ಜಗತ್ತು. … Continue reading ಮಹಿಳೆ-ಮಕ್ಕಳ ಅಭಿವೃದ್ಧಿಗೆ 43,118 ಕೋಟಿ ರೂ. ಮೀಸಲು