ಸೈಬರ್​ ಹಗರಣದಲ್ಲಿ ಸಿಲುಕಿದ್ದ 47 ಭಾರತೀಯರ ರಕ್ಷಣೆ; ಎಚ್ಚರದಿಂದಿರುವಂತೆ ರಾಯಭಾರಿ ಕಚೇರಿ ಸೂಚನೆ

blank

ನವದೆಹಲಿ: ಬೊಕಿಯೊ ಪ್ರಾಂತ್ಯದ ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (SEZ) ನಲ್ಲಿರುವ ಸೈಬರ್ ಹಗರಣ ಕೇಂದ್ರಗಳಲ್ಲಿ ಸಿಕ್ಕಿಬಿದ್ದಿದ್ದ 47 ಭಾರತೀಯರನ್ನು ರಕ್ಷಸಿರುವುದಾಗಿ ಲಾವೋಸ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶನಿವಾರ(ಆಗಸ್ಟ್​​ 31) ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾರತೀಯ ಪ್ರಜೆಗಳಿಗೆ ಲಾವೋಸ್ ಮತ್ತು ಕಾಂಬೋಡಿಯಾದಿಂದ ನೀಡುವ ಉದ್ಯೋಗದ ಆಫರ್‌ಗಳ ಬಗ್ಗೆ ಜಾಗರೂಕರಾಗಿರುವಂತೆ ಎಚ್ಚರಿಸಿದೆ. ಹಗರಣಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಎಚ್ಚರಿಕೆಯಿಂದ ಪರಿಶೀಲಿಸುವಂತೆ ಸೂಚಿಸಿದೆ. 

ಇದನ್ನು ಓದಿ: ಅ.5ಕ್ಕೆ ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಮುಂದೂಡಿಕೆ; ಚುನಾವಣಾ ಆಯೋಗ ಕೊಟ್ಟ ಕಾರಣ ಹೀಗಿದೆ…

ಬೊಕಿಯಾ ಪ್ರಾಂತ್ಯದ ಗೋಲ್ಡನ್ ಟ್ರಯಾಂಗಲ್ ವಿಶೇಷ ಆರ್ಥಿಕ ವಲಯ (SEZ) ವ್ಯಾಪ್ತಿಯಲ್ಲಿ ಸೈಬರ್ ಹಗರಣ ಕೇಂದ್ರಗಳಲ್ಲಿ ಸಿಕ್ಕಿಬಿದ್ದ 47 ಭಾರತೀಯರನ್ನು ರಾಯಭಾರ ಕಚೇರಿ ರಕ್ಷಿಸಿದೆ. ಗೋಲ್ಡನ್ ಟ್ರಯಾಂಗಲ್ SEZ ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ಅವರ ಶಿಸ್ತುಕ್ರಮದ ನಂತರ ಲಾವೋಸ್ ಅಧಿಕಾರಿಗಳು 29 ಮಂದಿಯನ್ನ ರಾಯಭಾರ ಕಚೇರಿಗೆ ಹಸ್ತಾಂತರಿಸಿದ್ದಾರೆ. ಆದರೆ ಇತರ 18 ಜನರು ಸಹಾಯ ಕೋರಿ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾಗಿ ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​​ನಲ್ಲಿ ತಿಳಿಸಿದೆ.

ವಂಚಕರು ಜನರನ್ನು ಆಕರ್ಷಿಸುವ ಸಲುವಾಗಿ ಡೇಟಿಂಗ್​ ಆ್ಯಪ್​ನಲ್ಲಿ ಮಹಿಳೆಯರಂತೆ ಚಾಟ್ ಮಾಡುತ್ತಾರೆ. ಬಳಿಕ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಎಷ್ಟೆಲ್ಲಾ ಆದಾಯ ಎಂಬುದರ ಬಗ್ಗೆ ಬ್ರೈನ್​ವಾಷ್​​ ಮಾಡುತ್ತಾರೆ. ಭಾರತದಲ್ಲಿ ಅನೇಕರನ್ನು ಈ ರೀತಿ ವಂಚಿಸಲಾಗಿದೆ ಎಂದು ರಕ್ಷಿಸಲ್ಪಟ್ಟ ಭಾರತೀಯರಲ್ಲಿ ಒಬ್ಬರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ರಾಜಧಾನಿ ವಿಯೆಂಟಿಯಾನ್‌ನಿಂದ ಬೋಕಿಯೊಗೆ ಸ್ಥಳೀಯ ಅಧಿಕಾರಿಗಳೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ತೆರಳಿದರು. ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ಪ್ರಶಾಂತ್ ಅಗರವಾಲ್ ಅವರು ಪಾರಾದ ತಂಡವನ್ನು ಭೇಟಿಯಾಗಿ ಅವರು ಎದುರಿಸಿದ ಸವಾಲುಗಳನ್ನು ಚರ್ಚಿಸಲು ಮತ್ತು ಮುಂದಿನ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ರಾಯಭಾರ ಕಚೇರಿಯು ಲಾವೋಸ್ ಅಧಿಕಾರಿಗಳೊಂದಿಗೆ ರಕ್ಷಿಸಲ್ಪಟ್ಟವರನ್ನು ಭಾರತಕ್ಕೆ ಕಳುಹಿಸಲು ಮಾಡಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿದೆ. ರಕ್ಷಿಸಲ್ಪಟ್ಟವರಲ್ಲಿ 30 ಮಂದಿ ಈಗಾಗಲೇ ಭಾರತಕ್ಕೆ ಕಳುಹಿಸಲಾಗಿದೆ.ಉಳಿದ 17 ಮಂದಿ ಅಂತಿಮ ಪ್ರಯಾಣದ ವ್ಯವಸ್ಥೆಗಾಗಿ ಕಾಯುತ್ತಿದ್ದು ಅವರು ಶೀಘ್ರದಲ್ಲೇ ಹೊರಡಲಿದ್ದಾರೆ ಎಂದು ರಾಯಭಾರಿ ಕಚೇರಿ ತಿಳಿಸಿದೆ. (ಏಜೆನ್ಸೀಸ್​​)

ಹೃದಯಾಘಾತಕ್ಕೆ ಮಲಬದ್ಧತೆ ಸಮಸ್ಯೆಯೂ ಒಂದು ಕಾರಣ; ಅಧ್ಯಯನದಿಂದ ಮಾಹಿತಿ ಬಹಿರಂಗ

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…